LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಂಗಾ ಪರಮೇಶ್ವರಿ ದೇವಿಯ ಜಯಂತಿ ಆಚರಣೆ

 

ವಿಜಯನಗರ (ಹೊಸಪೇಟೆ,) ಜೂನ್ ೨೫:ಗಂಗಾ ಪರಮೇಶ್ವರಿ ದೇವಿಯ ಜಯಂತಿ ಅಂಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಬುಧವಾರ ಗಂಗಾ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು. ಗಂಗಾ ಮತ ಸಮಾಜದ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಮಾಜದ ನೂರಾರು ಮಹಿಳೆಯರು, ಯುವಕರು, ಹಿರಿಯರು ಹಾಗೂ ಗಣ್ಯರು ಉತ್ಸಾಹದಿಂದ ಭಾಗವಹಿಸಿ ಧಾರ್ಮಿಕ ಆಚರಣೆಗೆ ಮೆರುಗು ತಂದರು.
ಗಂಗಾ ಜಯಂತಿ ಪ್ರಯುಕ್ತ ನಗರದ ಸಣ್ಣಕ್ಕಿ ವೀರಭದ್ರ ದೇವಸ್ಥಾನದಿಂದ ಗಂಗಾ ಪರಮೇಶ್ವರಿಯ ಭಾವಚಿತ್ರವನ್ನು ಅಲಂಕೃತ ತೆರದ ವಾಹನದಲ್ಲಿ ಪ್ರತಿಷ್ಠಾಪಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. 
ನೂರಾರು ಮಹಿಳೆಯರು ತಲೆಯ ಮೇಲೆ ಪೂರ್ಣಕುಂಭ ಹೊತ್ತು ಸಾಂಪ್ರದಾಯಿಕ ಉಡುಗೆಯಲ್ಲಿ ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಮೆರವಣಿಗೆಯು ಸಣ್ಣ ಕ್ಕಿ  ವೀರಭದ್ರ ದೇವಸ್ಥಾನದಿಂದ ಆರಂಭವಾಗಿ ವಾಲ್ಮೀಕಿ ವೃತ್ತ, ಚಿತ್ರಕೇರಿ , ಮೆನ್ ಬಜಾರ್, ಪಾದಗಟ್ಟಿ ಆಂಜನೇಯಸ್ವಾಮಿ ದೇವಸ್ಥಾನ, ಮಸೀದಿ ರಸ್ತೆ, ಮಾರ್ಕೆಟ್ ಹಾಗೂ ಮದಕರಿ ನಾಯಕ ವೃತ್ತದ ಮೂಲಕ ಸಾಗಿಬಂದು ಗಂಗಾ ಪರಮೇಶ್ವರಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.
ಮೆರವಣಿಗೆಯುದ್ದಕ್ಕೂ ಭಕ್ತರು ಭಜನೆ, ಜಯಘೋಷ ಹಾಗೂ ಧಾರ್ಮಿಕ ಘೋಷಣೆಗಳ ಮೂಲಕ ಭಕ್ತಿಭಾವ ಮೆರೆದರು. ತಾಷಾ, ಡೊಳ್ಳು ಸೇರಿದಂತೆ ಸಾಂಪ್ರದಾಯಿಕ ವಾದ್ಯಗಳ ಮೂಲಕ ನಗರದಾದ್ಯಂತ ಮೊಳಗಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು ಉತ್ಸವದ ಸಂಭ್ರಮವನ್ನು ಹೆಚ್ಚಿಸಿದರು.
ಈ ಸಂದರ್ಭದಲ್ಲಿ ಗಂಗಾ ಮತ ಸಮಾಜದ ವತಿಯಿಂದ ಒಂದು ಜೋಡಿಗೆ ಉಚಿತವಾಗಿ ವಿವಾಹ ನೆರವೇರಿಸಲಾಯಿತು. ನೂತನ ವಧು-ವರರಿಗೆ ಸಮಾಜದ ಮುಖಂಡರು ಆಶೀರ್ವದಿಸಿ ಶುಭ ಹಾರೈಸಿದರು. ಇದೆ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು ಸಮಾಜದ ಏಕತೆ, ಧಾರ್ಮಿಕ ನಂಬಿಕೆ ಹಾಗೂ ಸಾಮಾಜಿಕ ಬದ್ಧತೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿ ಗಂಗಾ ಜಯಂತಿ ಆಚರಣೆ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಪದಾಧಿಕಾರಿಗಳು, ಯುವಕರು, ಮಹಿಳೆಯರು ಹಾಗೂ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ