LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಹಾರದಲ್ಲಿ ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಹತ್ಯೆ

ಬಿಹಾರ,25: 2024ರ ಲೋಕಸಭೆ ಚುನಾವಣೆ ಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಬಿಹಾರದಲ್ಲಿ ಜೆಡಿಯು ಯುವ ಮುಖಂಡನ ಬರ್ಬರ ಹತ್ಯೆ ನಡೆದಿದೆ. ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಸೌರಭ್ ಕುಮಾರ್ (33) ಅವರನ್ನು ಬಿಹಾರದ ರಾಜಧಾನಿ ಪಾಟ್ನಾದ ಪನ್‌ಪುನ್‌ನಲ್ಲಿ ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ. ಜೆಡಿಯು ಮುಖ್ಯಮಂತ್ರಿ ನಿತೀಶ್ ಕುಮಾರ್ಅವರ ಪಕ್ಷವಾಗಿದ್ದು, ಸೌರಭ್ ಪಕ್ಷದ ಸರ್ವಾಂಗೀಣ ನಾಯಕರಾಗಿದ್ದರು.

ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತನ ಸ್ನೇಹಿತ ಮುನ್ಮುನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ಸಾ ಬಜಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತನ ಸ್ನೇಹಿತ ಮುನ್ಮುನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ ಪರಿಣಾಮ ಕುಮಾರ್ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೌರಭ್ ಕುಮಾರ್ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ನೀತಿ ಸಂಹಿತೆಯ ನಡುವೆಯೇ ನಡೆದಿರುವ ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಜನರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿ ಪಾಟ್ನಾ-ಗಯಾ ಹೆದ್ದಾರಿ ತಡೆ ನಡೆಸಿದರು. ಸೌರಭ್ ಕುಮಾರ್ ಹತ್ಯೆಯ ಮಾಹಿತಿ ತಿಳಿದ ತಕ್ಷಣ ಪಟ್ಲಿಪುತ್ರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ಅವರು ಸೌರಭ್ ಕುಮಾರ್ ಅವರ ಮನೆಗೆ ಮುಂಜಾನೆಯೇ ಆಗಮಿಸಿದ್ದರು.

ಸೌರಭ್ ಹತ್ಯೆಯ ನಂತರ ದುಃಖದಲ್ಲಿರುವ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ನಾಳೆ ಅಂದರೆ ಏಪ್ರಿಲ್ 26ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್​ 4ಕ್ಕೆ ಫಲಿತಾಂಶ ಹೊರಬರಲಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ