LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಮಡಗಾಸ್ಕರ್ ದೇಶದಲ್ಲಿ ಜೆನ್​​ ಝೀ ಆಕ್ರೋಶ​; ಹಿಂಸಾಚಾರದಲ್ಲಿ 22 ಮಂದಿ ಸಾವು

ಅಂಟಾನನರಿವೋ(ಮಡಗಾಸ್ಕರ್): ನೇಪಾಳದ ಬಳಿಕ ಪುಟ್ಟ ದ್ವೀಪ ದೇಶ ಮಡಗಾಸ್ಕರ್ ಜೆನ್​ ಝಿ ಪ್ರತಿಭಟನೆಗೆ ನಲುಗಿದ್ದು, ಅಲ್ಲಿನ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಲವೆಡೆ ನಡೆದ ಪ್ರತಿಭಟನೆಗಳಲ್ಲಿ ಇಲ್ಲಿವರೆಗೆ 22 ಜನರು ಸಾವನ್ನಪ್ಪಿದ್ದಾರೆ ಮತ್ತು 100ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಅಧಿಕಾರಿಗಳು ತಿಳಿಸಿದ್ದಾರೆ.


ಕಾರಣವೇನು?: ದೇಶದಲ್ಲಿ ಕಳೆದ ಗುರುವಾರದಿಂದ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯುತ್​ ಮತ್ತು ನೀರಿನ ಪೂರೈಕೆಯಲ್ಲಾದ ವ್ಯತ್ಯಯಕ್ಕೆ ಆಕ್ರೋಶ ಶುರುವಾಗಿತ್ತು. ಶಾಂತಿಯುತವಾಗಿ ಆರಂಭಗೊಂಡ ಪ್ರತಿಭಟನೆಗಳು ಕ್ರಮೇಣ ಹಿಂಸಾಚಾರಕ್ಕೆ ತಿರುಗಿವೆ. ಸರ್ಕಾರದ ವೈಫಲ್ಯದ ವಿರುದ್ಧ ಯುವಜನತೆ ತೀವ್ರ ಆಕ್ರೋಶ ಹೊರಹಾಕಿದ್ದು, ದೇಶದಲ್ಲಿ ಹೊಸ ಚುನಾವಣೆ ನಡೆಸಲೇಬೇಕೆಂದು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಈ ಪ್ರತಿಭಟನೆಗಳ ಬೆನ್ನಲ್ಲೇ ಅಧ್ಯಕ್ಷ ರಾಜೋಲಿನಾ ಅವರು ಭಾನುವಾರ ಇಂಧನ ಸಚಿವರನ್ನು ವಜಾಗೊಳಿಸಿದ್ದಾರೆ. ಇದೇ ವೇಳೆ, ಅಂಟಾನನರಿವೊಗೆ ಭೇಟಿ ನೀಡಿದ್ದು, ಜನಜೀವನವನ್ನು ರಕ್ಷಿಸುವ ಮತ್ತು ಸುಧಾರಿಸುವ ಕುರಿತು ಭರವಸೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್