LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

20ರ  ವಯಸ್ಸಿನಲ್ಲಿ ಎಡವಟ್ಟು ಮಾಡಿಕೊಂಡರೆ 70ರಲ್ಲಿ ಕಷ್ಟ ಪಡಬೇಕಾಗುತ್ತದೆ ; ಕಾಳಪ್ಪ ಪತ್ತಾರ್





ಬಳ್ಳಾರಿ. ಮಾ. 03 : ಮಾನವನ ಜೀವನದಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖವಾದ ಘಟ್ಟ, ಆ ಅವಧಿಯಲ್ಲಿ ನಾವು ಸರಿಯಾದ ಮಾರ್ಗವನ್ನು ಕಂಡುಕೊಳ್ಳದಿದ್ದರೆ ಜೀವನದಲ್ಲಿ ತುಂಬಾ ಕಷ್ಟ ಪಡಬೇಕಾಗುತ್ತದೆ ಒಬ್ಬ ಯುವಕ ಅಥವಾ ಯುವತಿ 20ರಲ್ಲಿ ಎಡವಿದರೆ 70ನೇ ವಯಸ್ಸಿನಲ್ಲಿ ಬಹಳ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯರಾದ ಕಾಳಪ್ಪ ಪತ್ತಾರ್ ತಿಳಿಸಿದರು.

 ಅವರು ನಗರದ ಮಧಿಕೇರಿ  ಭೀಮಯ್ಯ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಪುನರ್ಮಿಲನ ಮತ್ತು ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಉನ್ನತವಾದ  ಶಿಕ್ಷಣವನ್ನು ಪಡೆದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಇದರಿಂದ ಸಮಾಜದಲ್ಲಿ ಮತ್ತು ಕುಟುಂಬದಲ್ಲಿ ಒಳ್ಳೆಯ ಹೆಸರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಅದು ಬಿಟ್ಟು ನಾನಾತರದ ಅಡ್ಡದಾರಿಗಳನ್ನು ಹಿಡಿದು ಸಮಯವನ್ನು ವ್ಯರ್ಥ ಮಾಡಿದಲ್ಲಿ ಜೀವನದ ಕೊನೆಯ ದಿನಗಳಲ್ಲಿ ಬಹಳ ಪಶ್ಚತಾಪ ಪಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳನ್ನು ಎಚ್ಚರಿಸಿದರು.

 ತಮ್ಮ ಎಂದಿನ ಶೈಲಿಯಲ್ಲಿ ಹಾಸ್ಯ  ಭರಿತವಾದ ಮಾತುಗಳನ್ನಾಡಿದ ಕಾಳಪ್ಪ ಪತ್ತಾರ್, ತಮ್ಮ ಭಾಷಣ ದುದ್ದಕ್ಕೂ ಹಾಸ್ಯ ಪ್ರಸಂಗಗಳನ್ನು ಹೇಳುತ್ತಾ ಹಳೆ  ವಿದ್ಯಾರ್ಥಿಗಳನ್ನು ನಗೆಗಡಲಿನಲ್ಲಿ ತೇಲಿಸಿದರು. ಜೊತೆಗೆ ಜೀವನದ ಕುರಿತು ಗಂಭೀರವಾದ ವಿಷಯಗಳನ್ನು ತಿಳಿಸಿ ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಹಳೆ ನಾಗರಾಜರಾಯರು, ಆಶಾ ಬಾಯಿ, ಬೆಟ್ಟಪ್ಪ ಸೇರಿದಂತೆ ಅಂದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು  ಹಾಲಿ ಮುಖ್ಯ ಉಪಾಧ್ಯಯರಾದ ಶ್ರೀನಿವಾಸ್  ಹಾಗೂ ನೂರಾರು ಜನ ಹಳೆ ವಿದ್ಯಾರ್ಥಿಗಳು  ಭಾಗವಹಿಸಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್