LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಂಗಳೂರು: ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ,

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್​ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್