LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ನಾಲ್ಕು ವರ್ಷಗಳ ಪದವಿ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

ಬೆಂಗಳೂರು, ಮೇ 9: ಕಾಲೇಜು ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಪದವಿ ಆನರ್ಸ್​​ ಅಧ್ಯಯನಕ್ಕೆ 2024-25ನೇ ಶೈಕ್ಷಣಿಕ ವರ್ಷದಿಂದ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಇದರೊಂದಿಗೆ, ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಅಳವಡಿಸಿಕೊಳ್ಳುವುದಕ್ಕಿಂತಲೂ ಮೊದಲು, ಅಂದರೆ 2021-22 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಸಾಂಪ್ರದಾಯಿಕ ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಕರ್ನಾಟಕ ಮರಳಿದಂತಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿತ್ತು. ಆದರೆ, ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು.

ಉನ್ನತ ಶಿಕ್ಷಣ ಇಲಾಖೆ ಹೇಳುವುದೇನು?

ಇದೀಗ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಇಲಾಖೆ, ಎಸ್​​​ಇಪಿ ಆಯೋಗದ ವಿಸ್ತೃತ ಸಮಾಲೋಚನೆಯನ್ನು ಆಧರಿಸಿದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಐತಿಹಾಸಿಕ ಅನುಭವ, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವಿವಿಧ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ನೀಡುವುದನ್ನು ಗಮನದಲ್ಲಿಟ್ಟುಕೊಂಡು ಎಸ್​​​ಇಪಿ ಆಯೋಗ ಶಿಫಾರಸುಗಳ್ನು ಮಾಡಿದೆ ಎಂದು ಇಲಾಖೆ ಹೇಳಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್