LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ವಿವಾದಿತ ಪಠ್ಯ ವಾಪಸ್ ಪಡೆದ ಕರ್ನಾಟಕ ವಿವಿ: ಪರೀಕ್ಷೆ ಮುಂದೂಡಿಕೆ

ಧಾರವಾಡ, ಜನವರಿ 24: ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ  ಬಿಎ ಪದವಿ ಪುಸ್ತಕದಲ್ಲಿನ ಪಠ್ಯದ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದ ಹಿನ್ನಲೆ ವಿವಾದಿತ ನಾಲ್ಕನೇ ಅಧ್ಯಾಯ ಕೈಬಿಟ್ಟು ಪಠ್ಯಪುಸ್ತಕ ಮುಂದುವರಿಕೆ ವಿವಿ ಮುಂದಾಗಿದ್ದು, ಕವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಲಾಗಿದೆ.










ಘಟಕ-1ರ ನಾಲ್ಕನೆಯ ಅಧ್ಯಾಯದ ಈ ಲೇಖನವನ್ನು ತಕ್ಷಣದಿಂದ ಜಾರಿಗೆ ಬರುವ ಕೈಬಿಟ್ಟು (ಹೊರತುಪಡಿಸಿ) ಬೆಳಗು-1 ಪಠ್ಯಪುಸ್ತಕವನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ತತ್ಸಮಂಭಂಧಿತ ಪೂರಕ ಕಾರ್ಯಗಳನ್ನು ಜಾರಿ ಮಾಡುವುದಾಗಿ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಪಠ್ಯ ವಿವಾದ ಹಿನ್ನೆಲೆ ಜ.29ರಂದು ನಡೆಯಬೇಕಿದ್ದ ಎನ್‌ಇಪಿ ಸೆಮಿಸ್ಟರ್-1 ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿವಾದಿತ ಪಠ್ಯ ಬೆಳಗು-1 ಕೃತಿ ಆಧಾರಿತ ಪ್ರಶ್ನೆ ಪತ್ರಿಕೆವಾಗಿತ್ತು. ಆದರೆ ಬೆಳಗು-1 ಕೃತಿಯ ನಾಲ್ಕನೇ ಪಾಠ ವಿವಾದದ ಬೆನ್ನಲ್ಲಿಯೇ ಪಾಠ ವಾಪಸ್ ಪಡೆದಿದ್ದ ಕವಿವಿ, ಈಗ ಪರೀಕ್ಷೆ ಸಹ ಮುಂದೂಡಿದೆ.

ಬಿಎ, ಬಿಪಿಎ ಮ್ಯೂಸಿಕ್‌, ಬಿಎಫ್​ಎ, ಬಿಎಸ್​ಡಬ್ಲ್ಯೂ, ಬಿವಿಎ, BSc(ಹೋಮ್ ಸೈನ್ಸ್), ಬಿಟಿಟಿಎಂ ಈ ಎಲ್ಲಾ ಕೋರ್ಸ್‌ಗಳಿಗೆ ಬೆಳಗು-1 ಕೃತಿ ಸೇರಿತ್ತು. ಆದರೆ ಇದೀಗ ತಾಂತ್ರಿಕ ಕಾರಣದ ನೆಪ ಹೇಳಿ ಪರೀಕ್ಷೆ ಮುಂದೂಡಿಕೆ ಮಾಡಿ ಕವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಿದ್ದು, ಮುಂದಿನ ದಿನಾಂಕ ನಂತರ ತಿಳಿಸುವುದಾಗಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್