Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಕರಾಟೆ ಶಿಕ್ಷಕರ ಸಂಘ : ಪ್ರಧಾನ ಕಾರ್ಯದರ್ಶಿಯಾಗಿ ಕಟ್ಟೇಸ್ವಾಮಿ ಆಯ್ಕೆ

ಉಡುಪಿ,ಮಾ,31:: ರಾಜ್ಯ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಹೊಸ ಕಾರ್ಯಕಾರಿ ಸಮಿತಿ ರಚನೆಗೊಂಡಿದೆ.

ಇತ್ತೀಚೆಗೆ ಉಡುಪಿಯ ದುರ್ಗಾ ಇಂಟರನ್ಯಾಷನಲ್ ಹೋಟೇಲ್‌ನಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ನಿಯಮಾವಳಿಗಳ ಪ್ರಕಾರ ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಶಿಕ್ಷಕರು ಹಾಗೂ ಪ್ರತಿನಿಧಿಗಳು ಉತ್ಸಾಹದಿಂದ ಭಾಗವಹಿಸಿದರು.

ಪಾರದರ್ಶಕ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆದ ಚುನಾವಣೆಯಲ್ಲಿ ಮಂಗಳೂರಿನ ಮಹಮ್ಮದ್ ನದೀಮ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಬಳ್ಳಾರಿ ಜಿಲ್ಲೆಯ ಕಟ್ಟೇಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದರ ಜೊತೆಗೆ ಉಪಾಧ್ಯಕ್ಷರಾಗಿ ಬೆಂಗಳೂರಿನ ಸುಂದರಮ್, ಉಡುಪಿಯ ಸತೀಶ್ ಬೆಳ್ಮಣ್ಣು, ಕಾರವಾರದ ವಿಶಾಲ್, ಕೋಶಾಧಿಕಾರಿಯಾಗಿ ವಿಜಯಪುರದ ಶಿವಕುಮಾರ್ ಶಾರದಳ್ಳಿ, ರಾಜ್ಯ ವಕ್ತಾರರಾಗಿ ಕೊಪ್ಪಳದ ಮೌನೇಶ್ ವಡ್ಡಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿಣಿ ಸಭೆಯ ಸದಸ್ಯರಾಗಿ ವಿಜಯಪುರದ ಸುಭಾಷ್ ಮುತ್ಕೂರ್ ಹಾಗೂ ದಾವಣಗೆರೆಯ ಭಾಷ್ ಅವರುಗಳನ್ನೂ ಆಯ್ಕೆ ಮಾಡಲಾಗಿದೆ. ಇತರ ಪದಾಧಿಕಾರಿಗಳನ್ನೂ ಈ ಸಂದರ್ಭದಲ್ಲಿ ನೇಮಕ ಮಾಡಲಾಗಿದೆ.

ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ರಾಜ್ಯದ ಕರಾಟೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದು, ತರಬೇತಿ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ರಾಜ್ಯ ಮಟ್ಟದ ಕ್ರೀಡಾಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಸಂಘದ ಹಿರಿಯರು ಹಾಗೂ ಸದಸ್ಯರು ಹೊಸ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭಹಾರೈಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*