LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ; ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ.

ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ. ಎಂಎಸ್ ಅತಿಶಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅತಿಶಿ ಪ್ರಸ್ಸುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು ಲೋಕೋಪಯೋಗಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮತ್ತು ರೋಡ್ಸ್ ವಿದ್ವಾಂಸರಾಗಿದ್ದಾರೆ.

ಕಲ್ಕಾಜಿಯ ಶಾಸಕರಾಗಿದ್ದ 43 ವರ್ಷದ ಅತಿಶಿ, ದೆಹಲಿಯ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಸಚಿವರಾಗಿದ್ದರು.

ಕೇಜ್ರಿವಾಲ್ ಮತ್ತು ಸಿಸೋಡಿಯಾ ಜೈಲಿನಲ್ಲಿದ್ದಾಗ ಅತಿಶಿ ಪಕ್ಷದ ಕಾರ್ಯಕ್ರಮಗಳು ಮತ್ತು ಮಾಧ್ಯಮ ಸಂವಾದದಲ್ಲಿ ಪಕ್ಷದ ನಿಲುವನ್ನು ಸ್ಪಷ್ಪಡಿಸುವ ಮೂಲಕ ಬಿಜೆಪಿ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಅರವಿಂದ್ ಕೇಜ್ರಿವಾಲ್ ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಜನರು ಪ್ರಾಮಾಣಿಕತೆ ಪ್ರಮಾಣ ಪತ್ರ ನೀಡಿದಾಗ ಮಾತ್ರ ಸಿಎಂ ಕುರ್ಚಿ ಮೇಲೆ ಕೂರುತ್ತೇನೆ ಎಂದು ಅವರು ಹೇಳಿದ್ದರು.

ಹೀಗಾಗಿ ಸೆಪ್ಟೆಂಬರ್ 26 ಮತ್ತು 27ರಂದು ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ. ಅರವಿಂದ್ ಕೇಜ್ರಿವಾಲ್ ಇಂದು ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್