LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರಿ ನೌಕರರಿಗೆ  ಖಾದಿ  ಬಟ್ಟೆ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೋರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ರಾಜ್ಯ ಸರ್ಕಾರಿ ನೌರಕರರು ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.

  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.



  • ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.

  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.

  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.

  • ಎಂಎಸ್​ಐಎಲ್​ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.



  • ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್