LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆಲೆಬ್ರಿಟಿ ಚಿತ್ರಕ್ಕೆ ಕಿಚ್ಚ ಸುದೀಪ್ ಉತ್ತೇಜನ







     ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾ ನೀಡಬೇಕೆಂಬ ಉದ್ದೇಶದಿಂದ ಹುಟ್ಟಿಕೊಂಡಿರುವ ನಿರ್ಮಾಣ ಸಂಸ್ಥೆ ಗೌರಿ ಆರ್ಟ್ಸ್. ‌ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಚಿತ್ರದ ಟೈಟಲ್ ಲಾಂಚ್ ಇವೆಂಟ್  ಅದ್ದೂರಿಯಾಗಿ ನಡೆದಿದೆ.

     ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಪ್ರಿಯ ತಾರೆ  ಸುದೀಪ್ ಟೈಟಲ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಅಂದಹಾಗೇ ಸಿನಿಮಾಗೆ 'ಸೆಲೆಬ್ರಿಟಿ' ಎಂಬ ಟೈಟಲ್ ಇಡಲಾಗಿದೆ.

     ಸುದೀಪ್ ಮಾತನಾಡಿ "ನನಗೆ ಟೀಸರ್ ತುಂಬಾ ಇಷ್ಟವಾಯ್ತು. ಟೆಕ್ನಿಕಲ್ ಆಗಿ ಬ್ಯೂಟಿಫುಲ್ ಆಗಿದೆ. ವಿಜಯ್ ಮ್ಯೂಸಿಕ್ ಚೆನ್ನಾಗಿದೆ. ಇವ್ರು ಅರ್ಜುನ್ ಜನ್ಯ ಶಿಷ್ಯ. ಅಂಬಿ ನಿಂಗೆ ವಯಸ್ಸಾಯ್ತು ಚಿತ್ರದ ಮಾತಾಡೋ ತಾರೆಯ ಕಂಡ ಹಾಗೇ ಹಾಡು ಹಾಡಿರುವುದು ಇವರೇ. ಇವ್ರ ವಾಯ್ಸ್ ಬ್ಯೂಟಿಫುಲ್‌ ಆಗಿದೆ. ಟೀಸರ್ ಚೆನ್ನಾಗಿ ತೆಗೆದಿದ್ದಾರೆ. ಹೀರೋ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ನೀವು ಮಾಡಿರುವ ಡ್ಯಾನ್ಸ್ ನಮಗೆ ಮಾಡಲು ಹೇಳಿದರೆ ನಾವು ಭಯಪಡುತ್ತೇವೆ. ನಮಗೆ ಅಷ್ಟೆಲ್ಲಾ ಬರಲ್ಲ. ನಿಮಗೆ ಒಳ್ಳೆ ಕಲೆ ಇದೆ. ನಾನು ಇಲ್ಲಿಗೆ ಬರಲು ಮೂಲ ಕಾರಣ ಮಹೇಶ್ ಅಣ್ಣ. ಬಹಳ ವರ್ಷಗಳ ಪರಿಚಯ. ನನಗೆ ಬಹಳ ಬೇಕಾದ ವ್ಯಕ್ತಿ. ಸೆಲೆಬ್ರೆಟಿ ಸಿನಿಮಾ ಇವತ್ತು ಇಲ್ಲಿ ಲಾಂಚ್ ಆಗಿದೆ. ಒಂದು ಸಿನಿಮಾ ಮಾಡುವುದು ಇಸಿ ಕೆಲಸವಾದರೆ, ಅದು ಬೆಳೆಯಬೇಕು ಎಂದರೆ ಅದಕ್ಕೆ ನಿಮ್ಮ ಸಹಕಾರ ಬೇಕು. ಟೆಕ್ನಿಕಲ್ ಚಿತ್ರ ಎಕ್ಸಿಲೆಂಟ್ ಆಗಿದೆ. ಸಿನಿಮಾದಲ್ಲಿ ಇರುವ ಪ್ರತಿಯೊಬ್ಬರಿಗೂ ಒಳ್ಳೆದಾಗಲಿ" ಎಂದರು.

     ನಾಯಕ ಅಶ್ವಿನ್ "ನಾನು ಇದೇ ಮೊದಲ ಬಾರಿಗೆ ಸುದೀಪ್ ಸರ್ ಎದುರು ಮಾತಾಡ್ತಿದ್ದೇನೆ. ಏನ್ ಮಾತಾಡ್ಬೇಕು ಗೊತ್ತಾಗುತ್ತಿಲ್ಲ. ಅವರಿಗೆ ಧನ್ಯವಾದ. ಚಿಕ್ಕ ವಯಸ್ಸಿನಿಂದ ಕನಸು ಇಟ್ಕೊಂಡು ಬಂದಿದ್ದೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲೆ ಇರಲಿ" ಎಂದರು.

     "ನಮಸ್ಕಾರ ಕರ್ನಾಟಕ ಚೆನ್ನಾಗಿ ಇದ್ದೀರಾ" ಎಂದು ಕನ್ನಡದಲ್ಲಿಯೇ ಮಾತು ಶುರು ಮಾಡಿದ ಹಿರಿಯ ನಟಿ ಸಂಗೀತ  "ನನಗೆ ತುಂಬಾ ಸಂತೋಷವಾಗ್ತಿದೆ.‌ ನಾನು ಇಷ್ಟು ವರ್ಷವಾದ್ಮೇಲೆ ಸೆಲೆಬ್ರಿಟಿ ಸಿನಿಮಾ ಮೂಲಕ ಕಂಬ್ಯಾಕ್ ಆಗುತ್ತಿದ್ದೇನೆ. ನಿರ್ದೇಶಕ ಕಿರಣ್ ಅವರು, ಮಹೇಶ್ ಸರ್ ಹಾಗೂ ಇಡೀ ತಂಡಕ್ಕೆ ಧನ್ಯವಾದಗಳು. ಸುದೀಪ್ ಅವರ ಅಭಿಮಾನಿ ನಾನು. ಹೀರೋ ತುಂಬಾ ಹಾರ್ಡ್ ವರ್ಕ್ ಮಾಡ್ತಾರೆ.‌ ಈ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ" ಎಂದರು.

     'ಸೆಲೆಬ್ರಿಟಿ' ಸಿನಿಮಾವನ್ನು ಗೌರಿ ಆರ್ಟ್ಸ್ ಬ್ಯಾನರ್ ನಡಿ ಜೆಡಿಎಸ್ ನಾಯಕ ಸಾರಾ ಮಹೇಶ್ ಹಾಗೂ ಸುಷ್ಮಾ ಅಶ್ವಿನ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಯುವ ನಟ ಅಶ್ವಿನ್ ನಾಯಕನಾಗಿ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಹಾರ್ಡ್ ವರ್ಕ್ ಮಾಡಿ ಅಶ್ವಿನ್ ಇಂಡಸ್ಟ್ರಿಗೆ ಎಂಟ್ರಿ ಕೊಡ್ತಿದ್ದಾರೆ ಅನ್ನೋದು ಟೈಟಲ್ ಟೀಸರ್ ನೋಡಿದ್ರೆ ಗೊತ್ತಾಗುತ್ತದೆ. ಡ್ಯಾನ್ಸ್, ಫೈಟಿಂಗ್ ನಲ್ಲಿಯೂ ಅಶ್ವಿನ್ ಧೂಳೆಬ್ಬಿಸಿದ್ದಾರೆ.

     ಕಿರಣ್ ವಿಶ್ವನಾಥ್ ಸೆಲೆಬ್ರಿಟಿ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ನಾಯಕಿಯಾಗಿ ನಟಿ ಪ್ರಿಯಾಂಕಾ ಆಚಾರ್ ಅಭಿನಯಿಸುತ್ತಿದ್ದು, ಯಾರೇ ನೀನು ಚೆಲುವೆ ಖ್ಯಾತಿಯ ಸಂಗೀತ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಆಗುತ್ತಿದ್ದಾರೆ. ಒಂದೊಳ್ಳೆ ತಂಡ, ಒಂದು ಅದ್ಭುತ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುವ ನಿಟ್ಟಿನಲ್ಲಿದೆ. ಈ ಚಿತ್ರವನ್ನು ಸುರೇಶ್ ಬಾಬು ಸಿಬಿ ಪ್ರೆಸೆಂಟ್ ಮಾಡುತ್ತಿದ್ದಾರೆ.

     ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ರವಿ ವರ್ಮಾ ಸಾಹಸ ನಿರ್ದೇಶನ, ಗುಣ ಕಲಾ ನಿರ್ದೇಶನ, ಅನಿರುದ್ಧ್ ಶಾಸ್ತ್ರೀ ಸಾಹಿತ್ಯ ಹಾಡುಗಳಿಗಿದೆ. ಜಾನಿ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಸಾಂಗ್ಸ್ ಮೂಡಿ ಬರಲಿದೆ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್