LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲಯ ವಾರ್ಷಿಕೋತ್ಸವ  ಸಮಾರಂಭ "ನ್ಯಾಸಾ"-೨೦೨೬



ಬೆಳಗಾವಿ,ಜೂ,೧೩ : ಬೆಳಗಾವಿಯ ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲವು "ನ್ಯಾಸಾ" ವಾರ್ಷಿಕೋತ್ಸವನ್ನು-ದಿನಾಂಕ: ೧೩/೦೬/೨೦೨೬ ರಂದು ಕೆ.ಎಲ್.ಇ ಸಭಾಂಗಣದಲ್ಲಿ ಆಚರಿಸಿತು. 
ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲದ ಪ್ರಾಂಶುಪಾಲರಾದ ಪ್ರೊ.ಡಾ.ವೀರೇಶಕುಮಾರ ನಂದಗಾವ ಅವರು ಸಂಸ್ಥೆಯ ೨೦೨೫-೨೦೨೬ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ನ್ಯಾಸಾ ಮ್ಯಾಗಜಿನ್ ಮತ್ತು ವಾರ್ತಾ ಪತ್ರಿಕೆಯನ್ನು ಗಣ್ಯರು ಬಿಡುಗಡೆ ಮಾಡಿದರು ಹಾಗೂ ಈ ವೇಳೆ ಅತಿಥಿಗಳನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಶ್ರೀಕಾಂತ ಪುಲಾರಿ. ಕುಲಸಚಿವರು, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್, ಬೆಂಗಳೂರು ಇವರು ಆಗಮಿಸಿದ್ದರು ಮತ್ತು ಸಾಧನೆಗೈದ ಎಲ್ಲ ವಿಧ್ಯಾರ್ಥಿಗಳನ್ನು ಅಭಿನಂದಿಸಿ, ನರ್ಸಿಂಗ್ ವೃತ್ತಿಗೆ ಜಾಗತಿಕವಾಗಿ ಹೆಚ್ಚಿನ ಬೇಡಿಕೆಯಿದೆ ಮತ್ತು  ಕೆ.ಎಲ್.ಇ.  ಸಂಸ್ಥೆಯು ಸಮಾಜಕ್ಕೆ ಸಮರ್ಥ ಶುಶ್ರೂಷಕರನ್ನು ಒದಗಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆಯೆಂದು ಹೇಳಿದರು
ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ|| ವಿ.ಎಂ.ಪಟ್ಟಣಶೆಟ್ಟಿ ಅವರು ಅಧ್ಯಕ್ಷೀಯ ಭಾಷಣದಲ್ಲಿ ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲವನ್ನು ೧೦೦% ಪ್ರತಿಶತ ಶೈಕ್ಷಣಿಕ ಯಶಸನ್ನು ಸಾಧಿಸಿದ್ದಕ್ಕಾಗಿ ಅಭಿನಂದಿಸಿದರು ಹಾಗೂ ಶುಶ್ರೂಷಾ ಮಹಾವಿದ್ಯಾಲಯವು ಉದ್ಯೋಗ ಸೇವೆಗಳು ಮತ್ತು ಜಾಗತಿಕ ಭಾಷಾ ತರಬೇತಿಯಲ್ಲಿ ಶ್ರೇಷ್ಢವಾಗಿದೆಯೆಂದು ಉಲ್ಲೇಖಿಸಿದರು
ಈ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಿಕ್ಷಣದಲ್ಲಿ ಹೆಚ್ಚು ಅಂಕ ಗಳಿಸಿದ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕೆ.ಎಲ್.ಇ. ನರ್ಸಿಂಗ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಗುರುರಾಜ ಉಡಪಿ ಅವರು ಸರ್ವರನ್ನು ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ಡಾ. ಶ್ವೇತಾ ದಂಡಗಿ ವಂದಿಸಿದರು.
ಕಾರ್ಯಕ್ರಮದಲ್ಲಿ  ಕೆ.ಎಲ್.ಇ. ನರ್ಸಿಂಗ ಕಾಲೇಜಿನ ಡೀನ್ ಡಾ. ಸಂಗೀತಾ ಖರಡೆ ಮತ್ತು ವಿದ್ಯಾರ್ಥಿ ಸಮಿತಿಯ ಸಲಹೆಗಾರರು ಉಪಸ್ಥಿತರಿದ್ದರು. ವಾರ್ಷಿಕೋತ್ಸವು ಸಮಾರಂಭವು ರಾಷ್ಟ್ರಗೀತೆ ಹಾಡುವುದರ ಮೂಲಕ ಮುಕ್ತಾಯಗೊಂಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್