LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೋದಿ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ02: ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದು ಕೆಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಫೋಟೋ ಬಳಸಬಾರದು ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ, ಇದೀಗ ಮೋದಿ ಫೋಟೋ ಬಳಸಬೇಡಿ ಎಂದು ದೂರು ನೀಡಿದವರಿಗೆ ಮುಖಭಂಗವಾಗಿದೆ. ಮೋದಿಯವರ ಫೋಟೋ ಬಳಕೆಗೆ ನನಗೆ ಅಧಿಕಾರ ಸಿಕ್ಕಿದೆ. ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುತ್ತೇನೆ. ಈ ಚುನಾವಣೆಯಲ್ಲಿ ಜೀವನ ಪೂರ್ತಿ ಅವರ ಫೋಟೋ ಬಳಸುತ್ತೇನೆ. ನರೇಂದ್ರ ಮೋದಿಯವರ ವಿಚಾರಧಾರೆಯನ್ನು ನಾನು ಎಲ್ಲರಿಗೂ ತಿಳಿಸುತ್ತೇನೆ ಎಂದು ಹೇಳಿದರು.

ಬಹಳ ಸಂತೋಷದ ವಿಷಯವೆಂದರೆ ವಿಶ್ವ ನಾಯಕ ನನ್ನ ಜೊತೆ ಉಳಿದಿರುವುದು. ನರೇಂದ್ರ ಮೋದಿ‌ ನನ್ನ ಜೊತೆ ಉಳಿದರೆ ಅದೇ ನನಗೆ ಆನಂದ. ಈಶ್ವರಪ್ಪ ಮೋದಿ ಪೋಟೋ ಬಳಸುತ್ತಿದ್ದಾರೆಂದು ಬಿಜೆಪಿಯವರು ‌ಕೋರ್ಟ್​​​​ಗೆ ಹೋಗಿದ್ದರು. ಚುನಾವಣಾ ಆಯೋಗ, ಕೋರ್ಟ್ ಅವರಿಗೆ ಸೊಪ್ಪು ಹಾಕಲಿಲ್ಲ. ಮೋದಿ ಅವರನ್ನು ನನ್ನ ಹೃದಯದಲ್ಲಿ ‌ಇಟ್ಟುಕೊಂಡಿದ್ದೇನೆ. ಮೋದಿಯವರಿಗೆ ಅಪಮಾನ ಮಾಡಬಾರದು. ಗಣಪತಿ, ಈಶ್ವರನನ್ನು ಎಲ್ಲರೂ ಪೂಜೆ ಮಾಡುತ್ತಾರೆ. ನಿಮ್ಮ ಮನೆಯಲ್ಲಿ ಪೋಟೋ ‌ಇಟ್ಟುಕೊಳ್ಳಬೇಡಿ‌ ಅಂದರೆ ಹೇಗೆ? ಮೋದಿ ಅವರು ನನಗೆ ಮಾದರಿ ವ್ಯಕ್ತಿ, ಆದರ್ಶ ವ್ಯಕ್ತಿ. ನನ್ನ ಜೀವನಪೂರ್ತಿ ಮೋದಿ ಪೋಟೋ ಇಟ್ಟುಕೊಳ್ಳುತ್ತೇನೆ. ಯಾವುದೇ ಪಕ್ಷ ಅಥವಾ ವ್ಯಕ್ತಿ ನನ್ನನ್ನು ಮೋದಿಯವರಿಂದ ಬೇರ್ಪಡಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿ ಪೋಟೋ ‌ಬಳಸಲು ಹಿಂದೂ ಸಮಾಜಕ್ಕೆ ಅವಕಾಶ ಇದೆ. ನಾನು ಚುನಾವಣೆಗೆ ‌ಪೂರ್ಣ ಪ್ರಮಾಣದಲ್ಲಿ ‌ಮೋದಿ ಪೋಟೋ ಬಳಸುತ್ತೇನೆಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ