LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಓಟಿಎಸ್ ಪದ್ದತಿ ಸಾಲ ತಿರುವಳಿಗೆ ಅವಕಾಶ ಕಲ್ಪಿಸಿ :  ಕುರುಬರು ಶಾಂತಕುಮಾರ್ 

ಬಳ್ಳಾರಿ. ಜ. 30..: ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಓ ಟಿ ಎಸ್ ಪದ್ಧತಿಯಲ್ಲಿ ಸಾಲ ತಿರುವಳಿ ಮಾಡಿ ಹೊಸ ಸಾಲ ವಿತರಣೆ ಮಾಡುತ್ತಿದ್ದಾರೆ ಆದರೆ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಶಾಖೆಗಳಲ್ಲಿ  ಓ ಟಿ ಎಸ್ ಪದ್ದತಿಯಲ್ಲಿ ಸಾಲ ತಿರುವಳಿ ಮಾಡಲು ಮೀನಾ ಮೇಸ ಏಣಿಸುತ್ತಾ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಹಲವು  ಜಿಲ್ಲೆಗಳ ರೈತರು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ನೇತೃತ್ವದಲ್ಲಿ ಬಳ್ಳಾರಿಯ ಕೇಂದ್ರ ಕಚೇರಿಯಲ್ಲಿ  ಪ್ರತಿಭಟನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿದರು.

 ಅವರು ಇಂದು ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಖ್ಯ ಶಾಖೆಯ ಬಳಿ ರೈತರಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

 ಈ ಸಂದರ್ಭದಲ್ಲಿ  ಪ್ರತಿಭಟನಕಾರರ ಬಳಿ ಬಂದ  ಜನರಲ್ ಮ್ಯಾನೇಜರ್ ಸತ್ಯಪ್ರಸಾದ್ ಚಳುವಳಿಗಾರರ ಜೊತೆ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿ ನಮ್ಮ ಗ್ರಾಮೀಣ ಬ್ಯಾಂಕಿನಲ್ಲಿ ಪ್ರಸಕ್ತ ವರ್ಷ 61,000 ರೈತರಿಗೆ ಸಾಲ ಒಟಿಎಸ್ ನಲ್ಲಿ ತೀರುವಳಿ ಮಾಡಿದ್ದೇವೆ ಈಗ  ಓಟಿಎಸ್ ನಲ್ಲಿ ತಿರುವಳಿ ಮಾಡುವ ರೈತರಿಗೆ ಅಸಲು ಹಣದಲ್ಲಿಯೂ ರಿಯಾಯಿತಿ ನೀಡಿ ಕೃಷಿ ಸಾಲ ತಿರುವಳಿ  ಮಾಡಿ ರೈತರಿಗೆ ಹೊಸ ಸಾಲ ತೀರುವಳಿ ಮಾಡಿದ ಹಣಕ್ಕಿಂತ ಹೆಚ್ಚಾಗಿ ಇಪ್ಪತ್ತೈದರಷ್ಟು ಸಾಲ ವಿತರಿಸಲಾಗುವುದು.

 ಸರ್ಕಾರಿ ಯೋಜನೆಗಳ ಹಣ  ಸಾಲಕ್ಕೆ ಜಮಾ ಮಾಡಿಕೊಳ್ಳುವುದು  ಕಾನೂನು ಬಾಹಿರ ಈ ಬಗ್ಗೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ  ಈಗಲೇ ಸೂಚನೆ ನೀಡಲಾಗುವುದು

ವಸುಲಾತಿಗೆ ಜಾಮೀನುದಾರರ ಮೂಲಕ ಕಿರುಕುಳ ನೀಡುತ್ತಿರುವುದು ಹಾಗೂ ನ್ಯಾಯಾಲಯದಲ್ಲಿ ದಾವೆ ಕೂಡುವುದು ಬೇಡ ಎಂದು ತಾವು ಹೇಳುತ್ತಿದ್ದೀರಿ ಅಂತಹ ರೈತರು ಸಹಿ ಪಡೆದು ಸಾಲ ನವಿಕರಿಸಲಾಗುವುದು ಎಂದರು.

 ಹೊಸ ಟ್ರ್ಯಾಕ್ಟರ್ ಕೊಡುತ್ತೇವೆ ಎಂದು ಬ್ಯಾಂಕಿನವರು ಹಳೆ ಟ್ಯಾಕ್ಟರ್ ತೆಗೆದುಕೊಂಡು ಸಹಿ ಪಡೆದು ಸಾಲ ವಿತರಿಸಿಲ್ಲ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಇನ್ನೂ ಬಳ್ಳಾರಿಗೆ ಬಂದಿರುವ ರೈತರು ಲಿಖಿತ ರೂಪದಲ್ಲಿ ದೂರು ಸಲ್ಲಿಸಿದರೆ  ಅವರ ಸಮಸ್ಯೆ ಒಂದು ತಿಂಗಳಲ್ಲಿ ಪರಿಹರಿಸಲಾಗುವುದು ಇಂತಹ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಂದಿನ ತಿಂಗಳು 15ರ ನಂತರ ಮೈಸೂರಿನಲ್ಲಿ ವಲಯ ಮಟ್ಟದ ಸಭೆ ರೈತರ ಆಹ್ವಾನಿಸಿ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ  ಬಗೆಹರಿಸಲಾಗುವುದು ಎಂದು ತಿಳಿಸಿದರು  ಇಂದಿನ ಚಳುವಳಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್ .ರಾಜ್ಯಮಹಿಳಾ ಸಂಚಾಲಕಿ ಜೀವಿ ಲಕ್ಷ್ಮೀದೇವಿ ಕಮಲಮ್ಮ. ಬರನಪುರ ನಾಗರಾಜ್. ಬೈರಾರೆಡ್ಡಿ . ರವಿಚಂದ್ರ. ಪಿ ಸೋಮಶೇಖರ್. ನಂಜುಂಡಸ್ವಾಮಿ. ನಾಗೇಶ್ ಕುಮಾರ್. ಮಾದೇವಪ್ಪ. ಮುಂತಾದ ನೂರಾರು ರೈತರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್