LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕುಸಿತ: 30ಮನೆಗಳು ಹಾನಿ

ಶ್ರೀನಗರ,27:  ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಬರೊಬ್ಬರಿ 1 ಕಿ.ಮೀ ವರೆಗೂ ರಸ್ತೆಗಳಲ್ಲಿನ ಭೂಮಿ ಮುಳುಗಡೆಯಾಗಿ 30ಮನೆಗಳು ಹಾನಿಗೊಳಗಾಗಿದೆ.

ಗುರುವಾರ ಸಂಜೆಯಿಂದ ಜಮ್ಮು ಮತ್ತು ಕಾಶ್ಮೀರದ ರಂಬಾನ್-ಗೂಲ್ ರಸ್ತೆಯಲ್ಲಿ ಸುಮಾರು 1 ಕಿ.ಮೀ.ನಷ್ಟು ಪ್ರದೇಶದಲ್ಲಿ ಭೂಮಿ ಮುಳುಗಡೆಯಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಿಂದ 6 ಕಿಮೀ ದೂರದಲ್ಲಿರುವ ಪೆರ್ನೋಟ್ ಗ್ರಾಮದಲ್ಲಿ ಸುಮಾರು 30 ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

''ನಿನ್ನೆ ಸಂಜೆಯಿಂದ ರಸ್ತೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಉಂಟಾಗಿದ್ದು, 1000-1200 ಮೀಟರ್‌ ಉದ್ದದ ರಸ್ತೆಗೆ ಹಾನಿಯಾಗಿದೆ. ಈ ಭಾಗದಲ್ಲಿ ಭೂಮಿ ನಿಧಾನವಾಗಿ ಮುಳುಗುತ್ತಿದ್ದು, ಭೂಕುಸಿತದಿಂದಾಗಿ ಕೆಲವೆಡೆ 10-12 ಮೀಟರ್‌ಗಳಷ್ಟು ರಸ್ತೆ ಕುಸಿದಿದೆ. ಇಲ್ಲಿ ಇನ್ನೂ ಭೂ ಕುಸಿತ ಮುಂದುವರೆದಿದೆ. ಸಂತ್ರಸ್ತ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜನರಲ್ ರಿಸರ್ವ್ ಎಂಜಿನಿಯರ್ ಫೋರ್ಸ್‌ನ ಕಮಾಂಡಿಂಗ್ ಅಧಿಕಾರಿ ಎಸ್‌ಕೆ ಗೌತಮ್ ಹೇಳಿದ್ದಾರೆ.

"ನಿನ್ನೆ ಸಂಜೆ ರಾಂಬನ್ ನಿಂದ ಸುಮಾರು 5 ಕಿ.ಮೀ ದೂರದಲ್ಲಿ ಭೂಕುಸಿತ ಪ್ರಾರಂಭವಾಯಿತು. ಭೂ ಕುಸಿತ ಮತ್ತು ಭೂಮಿ ಮುಳುಗಡೆಯಿಂದಾಗಿ ರಸ್ತೆಗಳು ಹಾಳಾಗಿವೆ. ಸಮೀಪದ ಪ್ರದೇಶಗಳಲ್ಲಿ ಸುಮಾರು 30-40 ಮನೆಗಳು ಸಹ ಹಾನಿಗೊಳಗಾಗಿವೆ. ನಾವು ಈ ಭಾಗದಲ್ಲಿ ರಕ್ಷಣಾ ತಂಡಗಳನ್ನು ನಿಯೋಜಿಸಿದ್ದೇವೆ ಮತ್ತು ಅವರು ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ರಾಂಬನ್ ಎಡಿಡಿಸಿ ರೋಷನ್ ಲಾಲ್ ಮಾಹಿತಿ ನೀಡಿದ್ದಾರೆ. ಜಮೀನು ಮುಳುಗಡೆಯಿಂದ ಬೆಳೆ ಹಾನಿಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್