Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಅಫ್ರಿದಿ ಹತ್ಯೆ

ಇಸ್ಲಾಮಾಬಾದ್, 

ಪಾಕಿಸ್ತಾನ(Pakistan)ದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದ ಸುರಕ್ಷಿತ ತಾಣಗಳಲ್ಲಿ ಅಡಗಿರುವ ಉಗ್ರರ ಮೇಲೆ ನಡೆಯುತ್ತಿರುವ ದಾಳಿಗಳ ಸರಣಿ ಮತ್ತೊಂದು ತಿರುವು ಪಡೆದಿದೆ.

ಆರಂಭಿಕ ವರದಿಗಳ ಪ್ರಕಾರ, ಅಫ್ರಿದಿ ಮೇಲೆ ದಾಳಿಕೋರರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಅಮೆರಿಕದಿಂದ ನಿಷೇಧಕ್ಕೊಳಗಾಗಿರುವ ಲಷ್ಕರ್ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಅಫ್ರಿದಿ ಪ್ರಮುಖ ಕೊಂಡಿಯಾಗಿದ್ದ. ತನಿಖಾಧಿಕಾರಿಗಳ ಪ್ರಕಾರ, ಇದು ಪಕ್ಕಾ ಯೋಜಿತ ‘ಟಾರ್ಗೆಟೆಡ್ ಕಿಲ್ಲಿಂಗ್’ ಆಗಿದ್ದು, ದಾಳಿಕೋರರು ಅಫ್ರಿದಿಗೆ ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ನೀಡಿಲ್ಲ.

Advertisement

ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕರಿಗೆ ಕಾಲ ಕೂಡಿ ಬಂದಂತಿದೆ, ಕಳೆದ ತಿಂಗಳು ಲಾಹೋರ್‌ನಲ್ಲಿ ಲಷ್ಕರ್ ಸ್ಥಾಪಕ ಸದಸ್ಯ ಅಮೀರ್ ಹಮ್ಜಾನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್‌ನ ಹಿರಿಯ ಸಹೋದರ ತಾಹಿರ್ ಅನ್ವರ್ ಕೂಡ ನಿಗೂಢ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ.ರಿಯಾಸಿ ದಾಳಿಯ ಮಾಸ್ಟರ್‌ಮೈಂಡ್ ಕತಲ್ ಸಿಂಧಿಯನ್ನು ಕಳೆದ ವರ್ಷ ಝೇಲಂನಲ್ಲಿ ಹತ್ಯೆ ಮಾಡಲಾಗಿತ್ತು.

2023 ರಿಂದ ಪ್ರಾರಂಭವಾದ ಈ ಮಾದರಿಯ ಹತ್ಯೆಗಳು 2026 ರಲ್ಲಿ ತೀವ್ರಗೊಂಡಿವೆ. ಕೇವಲ ಈ ವರ್ಷವೊಂದರಲ್ಲೇ ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನಂತಹ ಸಂಘಟನೆಗಳಿಗೆ ಸಂಬಂಧಿಸಿದ ಕನಿಷ್ಠ 30 ಭಯೋತ್ಪಾದಕರನ್ನು ಲಾಹೋರ್, ಕರಾಚಿ ಮತ್ತು ಗಡಿ ಪ್ರದೇಶಗಳಲ್ಲಿ ಹತ್ಯೆ ಮಾಡಲಾಗಿದೆ. ಈ ‘ಅಪರಿಚಿತ ಬಂದೂಕುಧಾರಿಗಳು’ ಯಾರು ಎಂಬುದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ರಿಯಾಸಿ ದಾಳಿ ಮತ್ತು ಮುಂಬೈ ದಾಳಿಯ ಸಂಚುಕೋರರಿಗೆ ಆಪ್ತರಾಗಿದ್ದ ಕಮಾಂಡರ್‌ಗಳು ಒಬ್ಬೊಬ್ಬರಾಗಿ ಹತರಾಗುತ್ತಿರುವುದು ಲಷ್ಕರ್ ಮತ್ತು ಜೈಶ್‌ನಂತಹ ಸಂಘಟನೆಗಳ ಬೆನ್ನೆಲುಬು ಮುರಿದಂತಿದೆ. ಪಾಕಿಸ್ತಾನದ ನೆಲದಲ್ಲಿ ತಮಗೆ ರಕ್ಷಣೆ ಇಲ್ಲ ಎಂಬ ಸತ್ಯ ಈಗ ಭಯೋತ್ಪಾದಕರಿಗೆ ಅರಿವಾಗುತ್ತಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*