LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚಾಮರಾಜನಗರದಲ್ಲಿ ಗಲಾಟೆ: ಮತಯಂತ್ರ ಧ್ವಂಸ, ಮಾಡಿದ ಲಾಠಿ ಚಾರ್ಜ್

ಚಾಮರಾಜನಗರ, (ಏಪ್ರಿಲ್ 26): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ  ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ.


ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ