LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾರಿ ಜೀವನ್ ಸೀಜನ್-೩ ಉಚಿತ ತರಬೇತಿ ಶಿಬಿರಕ್ಕೆ ಚಾಲನೆ

ಬಳ್ಳಾರಿ,ಜೂ.11 ನಗರದ ಹವಂಬಾವಿ ರಸ್ತೆಯಲ್ಲಿರುವ ಗ್ಲಾಸ್ ಹೌಸ್ ನಲ್ಲಿ ಜರುಗಿದ ವಿಶ್ವ ಭಾರತಿ ಕಲಾನಿಕೇತನ ಹಾಗೂ ಶಿಕ್ಷಣ ಸಂಸ್ಥೆಯ ವತಿಯಿಂದ “ನಾರಿ ಜೀವನ್” ಸೀಸನ್-೩ ಉಚಿತ ತರಬೇತಿ ಶಿಬಿರಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ  ಪತ್ನಿ ಗಾಲಿ ಲಕ್ಷ್ಮಿ ಅರುಣ ಅವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ ೧೨ ವರ್ಷಗಳ ಯಶಸ್ವಿ ಆಡಳಿತ ಹಾಗೂ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಜನರಿಂದ ಚುನಾಯಿತರಾಗಿ ಅತ್ಯಂತ ದೀರ್ಘಾವಧಿಗೆ ಪ್ರಧಾನಮಂತ್ರಿಯಾಗಿ ಹೊಸ ದಾಖಲೆ ನಿರ್ಮಿಸಿರುವ ನರೇಂದ್ರ ಮೋದಿ ಜೀ ಅವರಿಗೆ ಅಭಿನಂದನೆ ಸಲ್ಲಿಸಿದರು. 
ಹಾಗೂ ಮುಂಜಾನೆ ಗ್ರಾಮ ದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮೋದಿಜಿಯವರ ಪ್ರತಿಯೊಂದು ಕಾರ್ಯವು ಯಶಸ್ವಿಯಾಗಲಿ ಅವರು ಉತ್ತಮ ಆರೋಗ್ಯದ ಆಯುಷ್ಯ ಹಾಗೂ ಇನ್ನಷ್ಟು ಶಕ್ತಿಯಿಂದ ದೇಶ ಸೇವೆಯನ್ನು ಮುಂದುವರಿಸಲಿ ಎಂದು ಶ್ರೀಮತಿ ಗಾಲಿ ಲಕ್ಷ್ಮಿ ಅರುಣ ಜನಾರ್ಧನ ರೆಡ್ಡಿಯವರು  ಪೂಜೆ ಸಲ್ಲಿಸಿದರು.
ಮೋದಿಜಿಯವರ “ನಾರಿ ಶಕ್ತಿ ದೇಶದ ಶಕ್ತಿ” ಎಂಬ ಆಶಾಯದಂತೆ ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬಿ ಸಮಾಜ ನಿರ್ಮಾಣದ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಮಹಿಳೆಯರಿಗೆ ಸ್ವ-ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಆರ್ಥಿಕ ಸ್ವಾವಲಂಬನೆಗೆ ಅಗತ್ಯವಾದ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ.
“ನಾರಿ ಜೀವನ” ಕಾರ್ಯಕ್ರಮದ ಮೂಲಕ ಮಹಿಳೆಯರು ಆತ್ಮವಿಶ್ವಾಸದಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಮತ್ತು ಮಾರ್ಗದರ್ಶನ ದೊರೆಯಲಿದ್ದು, ಮಹಿಳಾ ಸಬಲೀಕರಣದ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕದ ವೇಗದ ಮೆಹಂದಿ ಕಲೆಗಾರರಾದ ಮೆಹಂದಿ ನರೇಶ್ ಹಾಗೂ ನೂರಾರು ಮಹಿಳೆಯರು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್