LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಎಡಗೈಯೇ ಅಪಘಾತಕ್ಕೆ ಕಾರಣ  ಹೊಸ ಪೋಸ್ಟರ್ ರಿಲೀಸ್







    ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ  ವಿಶೇಷ ದಿನದ ಅಂಗವಾಗಿ 'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

     ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಚಿತ್ರ ಕಟ್ಟಿಕೊಡಲಾಗಿದೆ. ಅದರಂತೆಯೇ ಪೋಸ್ಟರ್ ಕೂಡ  ಆಕರ್ಷಕವಾಗಿದೆ. ಸೆಟ್ಟೇರಿದ ದಿನದಂದಲೂ ಚಿತ್ರತಂಡ ವಿಭಿನ್ನ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚು ಮಾಡಿದೆ.


     'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗ್ಗಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.


     ಎಡಗೈ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದು, ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರಲಿದೆ.















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್