LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಹಕಾರಿ ಸಂಘಗಳು ಜನಪರವಾಗಿ ಕೆಲಸ ಮಾಡಲಿ - ಕೊಟ್ಟೂರು ಶ್ರೀಗಳು

ಬಳ್ಳಾರಿ,ಫೆ,10- ಸಹಕಾರವು ಶರಣ ಸಂಸ್ಕೃತಿಯ ಜೀವಾಳವೇ ಆಗಿದೆ. ಹೊಸಪೇಟೆಯ ಈ ಬ್ಯಾಂಕ್ ಸ್ಥಾಪನೆ ಅದರ ಮುಂದುವರೆದ ಭಾಗವೇ ಆಗಿದೆ. ಸಮಾಜದ ವಿಸ್ಮೃತಿಗೆ ಒಳಗಾದ ಶ್ರೀ ಶರಣ ಸಕ್ಕರೆ ಕರಡೀಶ ಅವರ ಹೆಸರು ಈ ಸಹಕಾರಿ ಸಂಘಕ್ಕೆ ಇಟ್ಟಿದ್ದು ಸಮಯೋಚಿತ ಆಗಿದೆ ಎಂದು ಕೊಟ್ಟೂರು ಶ್ರೀಗಳು ಅಭಿಪ್ರಾಯ ಪಟ್ಟರು.

ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ನ ಹೊಸಪೇಟೆ ಶಾಖೆಯ ಉದ್ಘಾಟನೆ ಮಾಡಿ ಮಾತನಾಡಿದ, ಅವರು ಬಡವರು, ಮಧ್ಯಮ ವರ್ಗದ ಜನರಿಗೆ ಈ ಸಂಘ ಅನುಕೂಲ ಮಾಡಲಿ ಎಂದು ಹಾರೈಸಿದರು. ಬಂದ ಲಾಭದ ಸ್ವಲ್ಪ ಭಾಗವನ್ನು ಸಮಾಜಕ್ಕೂ ಹಂಚಬೇಕು ಎಂದು ಒತ್ತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ  ಎಸ್. ವಿ. ಸಂಕನೂರ ಅವರು ಮಾತನಾಡಿ "ಸಹಕಾರಿ ಸಂಘ ಬೆಳೆಯುತ್ತಿರುವುದು ತುಂಬ ಸಂತೋಷದ ಸಂಗತಿ. ಪಾರದರ್ಶಕ ಆಡಳಿತ ನೀಡಿದರೆ ಖಂಡಿತ ಸಹಕಾರ ಕ್ಷೇತ್ರ ಬೆಳವಣಿಗೆ ಆಗುವುದು ಖಚಿತ" ಎಂದು ಹೇಳಿದರು.

ಸಂಡೂರಿನ ಪ್ರಭುದೇವರ ವಿರಕ್ತಮಠದ ಸ್ವಾಮೀಜಿಗಳಾದ ಪ್ರಭುಸ್ವಾಮಿಗಳು ಆಶೀರ್ವಚನ ನೀಡಿದರು.

ಇನ್ನೋರ್ವ ಅತಿಥಿಗಳಾದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷರಾದ  ಜೀ.ನಂಜನಗೌಡರು ಮಾತನಾಡಿ " ಸಹಕಾರಿ ಸಂಸ್ಥೆ ನಿಜಕ್ಕೂ ಆರ್ಥಿಕವಾಗಿ ಸುಭದ್ರವಾಗಿದೆ. ಠೇವಣಿ ಸಂಗ್ರಹಣೆಗೆ ಯಾವ ಕೊರತೆಯೂ ಇಲ್ಲ. ಸಾಲ ಮಂಜೂರಾತಿಯಲ್ಲಿ ಸರಳ ನಿಯಮಗಳನ್ನು ಅಳವಡಿಸಿದ್ದೇವೆ. ಎಂದು ಹೇಳಿದರು.

ಜೀ. ನೀಲಕಂಠಪ್ಪ, ಬಳ್ಳಾರಿ ಶ್ರೇಷ್ಠ ಸಹಕಾರಿ ರತ್ನ ಪ್ರಶಸ್ತಿ ಪಡೆದಿದ್ದಾರೆ. ಅವರಿಗೆ ಸನ್ಮಾನ ಮಾಡಿದರು. ವಿವಿಧ ಗಣ್ಯರಿಗೆ ಸನ್ಮಾನ ಮಾಡಲಾಯಿತು.

ಶ್ರೀಮತಿ ಎನ್ ಪುಷ್ಪಾ ಮಲ್ಲಿಕಾರ್ಜುನ ಅವರು ಪ್ರಾರ್ಥನೆ ನೆರವೇರಿಸಿದರು. ಪ್ರಾಸ್ತಾವಿಕ ನುಡಿಯನ್ನು ಬ್ಯಾಂಕಿನ ಆಡಳಿತ ಮಂಡಳಿಯ ಅಧ್ಯಕ್ಷರಾದ  ಕಲ್ಗುಡಿ ಮಂಜುನಾಥ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಡಾ. ಮೃತ್ಯುಂಜಯ ರುಮಾಲೆ ಅವರು ಬರೆದ "ಶರಣ ಸಕ್ಕರೆ ಕರಡೆಪ್ಪನವರು" ಚಿತ್ತರಗಿ ಪೂಜ್ಯರಿಂದ ಬಿಡುಗಡೆ ಗೊಳಿಸಲಾಯಿತು.

ಷಾ ಭವರಲಾಲ್ ನಾಹರ್ ಬಿ.ಇಡಿ ಕಾಲೇಜಿನ ಅಧ್ಯಕ್ಷ  ಗುಡೇಕೋಟೆ ನಾಗರಾಜ್ ಅವರು ವಂದನಾರ್ಪಣೆ ಮಾಡಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್