LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಜೊತೆಗೆ ನಿಲ್ಲೋಣ : ಸಿವಿಸಿ



ಕೊಪ್ಪಳ: ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಾವೆಲ್ಲ ಆಯೋಗದ ಜೊತೆಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಬಿ ಎಲ್ ಎ (ಬೂತ್ ಲೆವೆಲ್ ಏಜೆಂಟ್) ಕಾರ್ಯಗಾರದಲ್ಲಿ ಅವರು ಮಾತನಾಡಿದರು.

'ಪರಿಷ್ಕೃತ ಮತದಾರ ಪಟ್ಟಿ   ದೋಷರಹಿತವಾಗಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ರಾಜಕೀಯ ಪಕ್ಷಗಳ ಮೇಲೆ ಇದೆ. ಈಗಾಗಲೇ ನೇಮಕಗೊಂಡಿರುವ ಬಿಎಲ್ಎ - 2 ಅವರು  ಸರಕಾರದ ಬಿ ಎಲ್ ಓ ಅವರ ಜೊತೆಗೆ ಸರಿಯಾಗಿ ಕೆಲಸ ನಿರ್ವಹಿಸಿ ಮತದಾರರ ಪಟ್ಟಿ ಸರಿಯಾಗಿ ಇರುವಂತೆ ನೋಡಿಕೊಳ್ಳಬೇಕಿದೆ. ಪಕ್ಷಾತೀತವಾಗಿ ಈ ಕೆಲಸ ಮಾಡಬೇಕು. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಮತದಾರರ ಪಟ್ಟಿ ಪರಿಷ್ಕೃತಗೊಳ್ಳುವುದು ಅತ್ಯಂತ ಅಗತ್ಯ,' ಎಂದು ಹೇಳಿದರು.

2002ರ ಮತದಾನ ಪಟ್ಟಿಯ ಆಧಾರದ ಮೇಲೆ ಕೆಲವೊಂದು ಬದಲಾವಣೆಗಳನ್ನು ಕೈಗೊಳ್ಳಲಾಗುತ್ತಿದೆ. ಅನರ್ಹ ಹಾಗೂ ನಿಧನ ಹೊಂದಿದವರ ಹೆಸರುಗಳನ್ನು ತೆಗೆದುಹಾಕಿ ಪಟ್ಟಿ ಸರಿಯಾಗಿ ಇರುವಂತೆ ನೋಡಿಕೊಳ್ಳುವ ಕೆಲಸ ಚುನಾವಣಾ ಆಯೋಗ ಮಾಡುತ್ತಿದೆ. ಈ ವಿಷಯಕ್ಕೆ ಸಂಬಂಧಪಟ್ಟ ಹಾಗೆ ಜೆಡಿಎಸ್ ಪಕ್ಷ ಪ್ರಾಥಮಿಕ ಹಂತದ ಕೆಲಸಗಳನ್ನು ಪೂರೈಸಿ ಜಿಲ್ಲಾಡಳಿತದ ಜೊತೆಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಈ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳ್ಳಲು ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇರಲಿದೆ ಎಂದು ಹೇಳಿದರು.

ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ ಹಿಟ್ನಾಳ್ ರವರು,  ಜಿಲ್ಲಾಧಿಕಾರಿ ಡಾ. ಸುರೇಶ  ಇಟ್ನಾಳ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಪಕ್ಷದ ಮುಖಂಡರು ಹಾಗೂ ಬಿ ಎಲ್ ಎ  ಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್