LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭೂತಾನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರ್ಚನಾ ಅಥಣಿ ಭಾಗಿ



ಅಥಣಿ,ಮೇ,೨೭ : ಮೇ ೨೮ ರಂದು ಭೂತಾನ್ ದೇಶದ ರಾಜಧಾನಿ ಥಿಂಪುನ ಪೆಜೊಮ್  ಸಭಾಂಗಣದಲ್ಲಿ  ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ವತಿಯಿಂದ ಹಮ್ಮಿಕೊಂಡಿರುವ ೫೪ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಫೆಸ್ಟ್ ಕಾರ್ಯಕ್ರಮದಲ್ಲಿ ಹಲವಾರು ದಿಗ್ಗಜರೊಂದಿಗೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಸರಕಾರಿ ಫೌಢ ಶಾಲೆಯ ಸಹ ಶಿಕ್ಷಕಿ ಡಾ.ಅರ್ಚನಾ ಅಥಣಿ ಅವರು ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ  ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲಿದ್ದಾರೆ.
 ಭೂತಾನ್‌ನ ಪ್ರತಿಷ್ಠಿತ ಇಂಟರನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಇಂಡಿಯಾ ಹಾಗೂ ಫ್ರೆಂಡ್ಸ್ ಶಿಫ್ ಕ್ಲಬ್ ಭೂತಾನ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಭೂತಾನಿನ ಸಂಸತ್ ಸದಸ್ಯ ಎಚ್.ಇ. ದಶೋ ಉಗೇನ್ ಲಾಮಾ ಉದ್ಘಾಟಿಸಲಿದ್ದಾರೆ. ಭಾರತ ದೇಶದಿಂದ ಕರ್ನಾಟಕದ ಪ್ರತಿನಿಧಿಯಾಗಿ ಸಾಹಿತಿ ಡಾ.ಅರ್ಚನಾ ಅಥಣಿ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ  ಅನೇಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
 ಸಾಹಿತಿ ಡಾ.ಅರ್ಚನಾ ಅಥಣಿಯವರು ಕನ್ನಡ ಸಾಹಿತ್ಯ ಸಂಸಕೃತಿ ಪ್ರಸಾರ ಮಾಡಲು ವಿದೇಶಗಳ ಕನ್ನಡ ಸಂಘಟನೆಗಳ ಜೊತೆಗೂಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಾಲ್ಡೀವ್ಸ್, ದುಬೈ,ಒಮಾನ್, ಶ್ರೀಲಂಕಾ, ಇಂಡೋನೇಷ್ಯಾ, ಸಿಂಗಪೂರ,ಥೈಲ್ಯಾಂಡ್, ವಿಯೆಟ್ನಾಮ್, ಅಂಡಮಾನ್, ಲಕ್ಷದ್ವೀಪ ಸೇರಿದಂತೆ ಹಲವಾರು ದೇಶಗಳಲ್ಲಿ ಜರುಗಿರುವ ಅಂತಾರಾಷ್ಟ್ರೀಂಕನ್ನಡ ಸಂಸ್ಕೃತಿ ಉತ್ಸವಗಳಲ್ಲಿ  ಪಾಲ್ಗೊಂಡು ಕನ್ನಡ ನಾಡು,ನುಡಿ, ಭಾಷೆ, ಸಂಸ್ಕೃತಿಯ ಪರಂಪರೆಯನ್ನುಉಳಿಸಿ ಬೆಳೆಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ಪ್ರದಾನ, ಜರುಗಲಿದೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದಾರೆ.
 ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಾಹಿತ್ಯ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ ಡಾ.ಅರ್ಚನಾ ಅಥಣಿ ಅವರು, ದೇಶ ವಿದೇಶಗಳಲ್ಲಿ ತಮ್ಮ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೇ, ತಮ್ಮ ಬರಹ, ಕವಿತೆಗಳ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವುದು ಸಂತಸದ ಸಂಗತಿ.
 ಅವರು ಬೆಳಗಾವಿ ಜಿಲ್ಲೆಯಿಂದ ಏಕೈಕ ಕವಿಯತ್ರಿಯಾಗಿ ಆಯ್ಕೆಯಾಗಿದ್ದು ಜಿಲ್ಲೆಯಲ್ಲಿ  ಸಾಹಿತ್ಯಾಭಿಮಾನಿಗಳಲ್ಲಿ ಹರ್ಷವನ್ನುಂಟು ಮಾಡಿದೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್