LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ದಾಖಲೆ ಪರಿಶೀಲನೆ

ಬಳ್ಳಾರಿ. ಮೇ 29 :  ಬಳ್ಳಾರಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ವಲಯ ಕಚೇರಿಗಳಲ್ಲಿ ಮತ್ತು ಕೇಂದ್ರ ಕಚೇರಿಗಳಲ್ಲಿ ಅಕ್ರಮವಾಗಿ ಬಿ-ಖಾತೆ ವಿತರಿಸುತ್ತಾರೆಂದು ಹಾಗೂ ಫಾರಂ-2 ವಿತರಣೆಯಲ್ಲಿ ಹಾಗೂ ಇತರೆ ಸರ್ಕಾರಿ ಸೇವೆಯನ್ನು ನೀಡಲು ವಿಳಂಬಮಾಡುತ್ತಾ ಅಕ್ರಮ ಎಸಗುತ್ತಿದ್ದಾರೆಂದು ಹಲವು ದೂರು/ಮಾಹಿತಿಗಳು ಬಂದಿದ್ದರಿಂದ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳು, ಕರ್ನಾಟಕ ರಾಜ್ಯ ರವರು ಸ್ವಯಂ ಪ್ರೇರಿತವಾಗಿ ದೋರನು ದಾಖಲಿಸಿಕೊಂಡು, ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ಅದರ ವಲಯ ಕಚೇರಿಗಳ ಶೋಧನೆಗಾಗಿ ಶೋಧನಾ ವಾರಂಟ್ ಅನ್ನು ಹೊರಡಿಸಿದ ಮೇರೆಗೆ ಬಳ್ಳಾರಿ ಲೋಕಾಯುಕ್ತ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ವಾಸುದೇವರಾಮ.ಎನ್ ರವರ ನೇತೃತ್ವದಲ್ಲಿ ಬಳ್ಳಾರಿ ಲೋಕಾಯುಕ್ತ ಘಟಕದ ಪೊಲೀಸ್ ಸಿಬ್ಬಂದಿ ಹಾಗೂ ಪಂಚಸಾಕ್ಷಿದಾರರೊಂದಿಗೆ ಒಟ್ಟು 4 ತಂಡಗಳಾಗಿ ಈ ದಿನ ದಿನಾಂಕ:29/05/2026 ರಂದು ಬೆಳಿಗ್ಗೆ ಏಕಕಾಲಕ್ಕೆ ಬಳ್ಳಾರಿ ಮಹಾನಗರ ಪಾಲಿಕೆಯ ಮುಖ್ಯ ಕಚೇರಿ ಹಾಗೂ 3 ವಲಯ ಕಚೇರಿಗಳ ಮೇಲೆ ದಾಳಿ ಮಾಡಿ, ಶೋಧನೆಯನ್ನು ಮಾಡಿದ್ದು, ಶೋಧನೆ ಸಮಯದದಲ್ಲಿ ಹಲವು ಅಕ್ರಮಗಳು ಕಂಡುಬಂದಿದ್ದು, ಈ ಬಗ್ಗೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಶೋಧನಾ ಕಾರ್ಯವನ್ನು ಮುಕಾಯಗೊಳಿಸಿರುತ್ತದೆ.
ಈ ಶೋಧನಾ ಕಾರ್ಯದಲ್ಲಿ ಲೋಕಾಯುಕ್ತ ಡಿ.ವೈ.ಎಸ್.ಪಿ ರವರಾದ  ಎಸ್.ಎಸ್.ಬೀಳಗಿ, ಪೊಲೀಸ್,  ಸಚಿನ್ ಎಸ್ ಚಲವಾದಿ, ಪೊಲೀಸ್ ಇನ್ಸ್‌ಪೆಕ್ಟರ್ ರವರಾದ  ಗುರಣ್ಣ ಎಸ್ ಹೆಬ್ಬಾಳ್, ಶ್ರೀ ಸುರೇಶ್ ಎಂ ಬಾವಿಮನಿ,  ರಾಜೇಶ್ ಲಮಾಣಿ,  ಅಮರೇಶ ಹುಬ್ಬಳ್ಳಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್