LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಾರಾಣಾ ಪ್ರತಾಪ್ ಸಿಂಹ ಮೂರ್ತಿ ಅನಾವರಣಗೊಳಿಸಿದ ಶಾಸಕ ಯತ್ನಾಳ


ವಿಜಯಪುರ: ನಗರದ ವಾರ್ಡ್ ನಂ.೧೧ ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಹಾಗೂ ಉದ್ಘಾಟನೆಯನ್ನು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಬುಧವಾರ ನೆರವೇರಿಸಿದರು.
ವಿಜಯಪುರ ನಗರದ ವಾರ್ಡ್ ನಂ.೧೧ ರಲ್ಲಿ ಬರುವ ಅಟಲ್ ಬಿಹಾರಿ ವಾಜಪೇಯಿ ಮಾರ್ಗದಲ್ಲಿ ಕೆ.ಬಿ.ಜೆ.ಎನ್.ಎಲ್ ವತಿಯಿಂದ ಎಸ್.ಸಿ.ಪಿ/ ಟಿ.ಎಸ್.ಪಿ ವಿಶೇಷ ಘಟಕ ಯೋಜನೆಯಡಿ/ಗಿರಿಜನ ಉಪ ಯೋಜನೆಯಡಿ ಮಂಜೂರಿಸಲಾದ ರೂ.೯ ಲಕ್ಷ ಅನುದಾನದಲ್ಲಿ ನಿರ್ಮಾಣ ಮಾಡಲಾದ ಶುದ್ಧ ಕುಡಿಯುವ ನೀರಿನ ಘಟಕ, ರಾಷ್ಟ್ರ ವೀರ ಶ್ರೀ ಮಹಾರಾಣಾ ಪ್ರತಾಪ್ ಸಿಂಹ ವೃತ್ತದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಮಹಾರಾಣಾ ಪ್ರತಾಪ್ ಸಿಂಹ ಮೂರ್ತಿಯನ್ನು ಉದ್ಘಾಟಿಸಿದರು. ನಂತರ ಮಿನಿ ಮಾದರ ಓಣಿಯ ಶ್ರೀ ವಿಠೋಬಾ ಮಂದಿರ ಹತ್ತಿರ ಸನ್ ೨೦೨೫-೨೬ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಿಸಲಾದ ರೂ.೧೦ ಲಕ್ಷ ಅನುದಾನ ದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.
ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ವಿಠ್ಠಲ ಹೊಸಪೇಟೆ, ರಾಜಶೇಖರ ಕುರಿಯುವರ, ಮುಖಂಡರಾದ ಸಿದ್ದರಾಮಪ್ಪ ಉಪ್ಪಿನ, ಅಶೋಕ ಬೆಲ್ಲದ, ಬಾಬು ಶಿರಶ್ಯಾಡ, ಉಮೇಶ ವೀರಕರ, ಮಧು ಕಲಾದಗಿ, ವಿಜಯ ರಜಪೂತ, ಶಿವಲಿ ಸಾಳುಂಕೆ, ಬಲಭೀಮ ಸಾಳುಂಕೆ, ತಾನಾಜಿ ಸಾಳುಂಕೆ, ಸೋಮು ರಣದೇವಿ, ಗಣೇಶ ರಣದೇವಿ, ಪಾಂಡುರಂಗ, ಶಂಕರ ಚಲವಾದಿ, ಶ್ರೀಶೈಲ ದೇವರ ಮತ್ತಿತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್