LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾರಾಷ್ಟ್ರ ಚುನಾವಣೆ: ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ. ಲಾತೂರ್, ಮಂಗಳವೇಡ್, ಅಕ್ಕಲಕೋಟ, ಜತ್ತ್ ಮತ್ತು ದಕ್ಷಿಣ ಸೊಲ್ಲಾಪುರ ಸೇರಿದಂತೆ ಈ 15 ವಿಧಾನಸಭಾ ಕ್ಷೇತ್ರಗಳಲ್ಲಿ ಕನ್ನಡ ಮಾತನಾಡುವ ಜನ ಹೆಚ್ಚು. ಮಹಾರಾಷ್ಟ್ರದ ಈ ಕ್ಷೇತ್ರಗಳಲ್ಲಿ ಕನಿಷ್ಠ 50 ರಿಂದ 60 ಲಕ್ಷ ಕನ್ನಡ ಮಾತನಾಡುವವರಿದ್ದು, ಹೆಚ್ಚಿನವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇದರ ಮಹತ್ವವನ್ನು ಮನಗಂಡ ವಿವಿಧ ಪಕ್ಷಗಳ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಪ್ರಮುಖ ಕನ್ನಡಿಗ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಆಹ್ವಾನಿಸಿದ್ದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಇತ್ತೀಚೆಗೆ ಮಹಾರಾಷ್ಟ್ರದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿತು ಮತ್ತು ಕರ್ನಾಟಕ-ಮಹಾರಾಷ್ಟ್ರ ಗಡಿ ರೇಖೆಯನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಲು ಕೇಳಿದೆ. ಕುತೂಹಲಕಾರಿ ಸಂಗತಿಯೆಂದರೆ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ತಮ್ಮ ಚುನಾವಣಾ ಭಾಷಣಗಳಲ್ಲಿ ಗಡಿ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಬದಲಾಗಿ ಕನ್ನಡ ಮತದಾರರನ್ನು ತಲುಪಲು ಕನ್ನಡದಲ್ಲಿ ಪೋಸ್ಟರ್, ಹ್ಯಾಂಡ್ ಬಿಲ್ ಗಳನ್ನು ಮುದ್ರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್