LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಿಳಾ ಮಂಡಳ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್




*


ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ  ಘಟಸ್ಥಾಪನೆ ಹಾಗೂ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ಮಹಿಳಾ ಮಂಡಳವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿದರು.


ಹಿಂದೂ ಸಂಪ್ರದಾಯದ ಪ್ರಕಾರ ನವರಾತ್ರಿ ಹಬ್ಬಕ್ಕೆ ಬಹಳ ಮಹತ್ವವಿದ್ದು, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ದೊರಕಿದ್ದು ಖುಷಿ ತಂದಿದೆ. ಈ ಸಂದರ್ಭದಲ್ಲಿ ಉದ್ಘಾಟನೆಗೊಂಡಿರುವ ಮಹಿಳಾ ಮಂಡಳಿ ಸಮಾಜಮುಖಿ ಕಾರ್ಯ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ  ಪ್ರತಿವರ್ಷ ತೆರಳುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಕ್ತರಿಗೆ ಅಲ್ಲಿ ಸಕಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.


ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲೆಡೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಇನ್ನೂ ಹಲವಾರು ಯೋಜನೆಗಳನ್ನು ತರಲು ಪ್ರಯತ್ನಿಸುತ್ತಿದ್ದೇನೆ. ಎಲ್ಲರ ಆಶಿರ್ವಾದವಿರಲಿ ಎಂದು ಅವರು ಹೇಳಿದರು.


ಅರುಣ ದೇವನ್, ದೀಪಕ್ ಪಾಟೀಲ, ವೈಜು ರಾಜಗೋಳ್ಕರ್, ಸುರೇಶ ಪಾಟೀಲ, ವಿನಾಯಕ ಪಾಟೀಲ, ರವಿ ಪಾಟೀಲ, ಗೋಪಾಲ ಚೌಗುಲೆ, ರೋಹನ ಪಾಟೀಲ, ಜ್ಯೋತಿಬಾ ಬಡಸ್ಕರ್, ಶಿವಾಜಿ ಗುರವ್, ಬಾಳಾರಾಮ ಕದಂ, ನಾನಾ ಪಾಟೀಲ, ಶುಭಾಂಗಿ ರಾಜಗೋಳ್ಕರ್, ವಿಮಲ ಸಾಕ್ರೆ, ಲತಾ ಶಿವಾಂಗೆಕರ್ ಮುಂತಾದವರು ಉಪಸ್ಥಿತರಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್