LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಡ್ಡಿ ಅತಂಕಗಳ ನಡುವೆ ಮತ್ತೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆಯಾಗಿ ಮತ್ತೆ ಮಂಜುಳ ನೇಮಕ







ಬಳ್ಳಾರಿ, ಮಾ.23: ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ  ಪಕ್ಷದಲ್ಲಿ ಶ್ರಮಿಸುತ್ತಾ ಬಂದಿರುವ ನೇಕಾರ ಸಮುದಾಯದ ಎಂ.ಎಸ್.ಮಂಜುಳ ಮತ್ತೆ ಬಳ್ಳಾರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಸೌಮ್ಯಾರೆಡ್ಡಿ ನೇಮಕ ಮಾಡಿದ್ದಾರೆ.

ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕೆಪಿಸಿಸಿ, ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರುವ ಹಾಗೂ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಮೂಲಕ ಪಕ್ಷದ ಬಲವರ್ಧನೆಗಾಗಿ ಕಾರ್ಯೋನ್ಮುಖರಾಗಬೇಕೆಂದು ಸೌಮ್ಯರೆಡ್ಡಿ ಸೂಚಿಸಿದ್ದಾರೆ.

ಅಡ್ಡಿ ಆತಂಕ:

ಒಂದು ಬಾರಿ ಅಧ್ಯಕ್ಷೆಯಾಗಿದ್ದ ಮಂಜುಳ ಅವರನ್ನು ಈ ಬಾರಿ ಬದಲು ಮಾಡಿ, ಮಾಜಿ ಮೇಯರ್ ರಾಜೇಶ್ವರಿ, ಪಾಲಿಕೆ ಸದಸ್ಯೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಹೊನ್ನಪ್ಪ ಮತ್ತು ಈ ಹಿಂದೆ ಅಧ್ಯಕ್ಷೆಯಾಗಿದ್ದ ಪದ್ಮಾ ಇವರಲ್ಲಿ ಒಬ್ಬರನ್ನು ಮಾಡಲು ಪ್ರಭಾವಿ ಮುಖಂಡರೊಬ್ಬರು ಭಾರಿ ಪ್ರಯತ್ನ ಮಾಡಿದ್ದರು. ಅದರಲ್ಲೂ ಕವಿತಾ ಹೊನ್ನಪ್ಪ ಅವರ ಹೆಸರು ಮುಂ ಚೂಣಿಯಲ್ಲಿತ್ತು.

ಆದರೆ ತಾನು ಪಕ್ಷದ ಬೆಳವಣಿಗೆ ಮಾಡಿರುವ ಕೆಲಸವನ್ನು ತಿಳಿಸಿ. ಛಲಬಿಡದೆ ತನ್ನ ಸ್ಥಾನವನ್ನು ಮತ್ತೊಮ್ಮೆ ಭದ್ರಪಡೊಸಿಕೊಂಡಿದ್ದಾರೆ ಮಂಜುಳಾ ಅವರು.

ನನಗನ ಮೇಲೆ ಅನೇಕ ಪಿತೂರಿಗಳು ನಡೆದವು. ಕೆಲವರು ನನ್ನು ವಿರುದ್ದ ಮಾಡಿದ ತಂತ್ರ ಫಲಿಸಲಿಲ್ಲ. ಪಕ್ಷದ ನಾಯಕರಿಗೆ ನನ್ನ ಪಕ್ಷ ನಿಷ್ಟೆ ಗೊತ್ತಿದೆ. ಅದಕ್ಕಾಗಿ ಮುಂದುವರೆಸಿದ್ದಾರೆ. ಪಕ್ಷವೇ ನನ್ನ ಉಸಿರು. ನಮಗೂ ಸರ್ಕಾರದಲ್ಲಿ ನಾಮ ನಿರ್ದೇಶನದ ಹುದ್ದೆ ನೀಡಬೇಕಿದೆ ಎಂದು  ತಿಳಿಸಿದ್ದಾರೆ.

ಪಕ್ಷದ ಹಿರಿಯರಾದ ನಾಸೀರ್ ಹುಸೇನ್, ನಾಗೇಂದ್ರ, ಹುಮಾಯೂನ್ ಖಾನ್ ಮೊದಲಾದವರ ಸಹಕಾರವನ್ನು ಸ್ಮರಿಸಿದ್ದಾರೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್