LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾಂಗ್ರೆಸ್ ಸೇರಿದ ರಾಜಹಂಸಗಡ ಹಲವು ಬಿಜೆಪಿ ಮುಖಂಡರು 









 ಬೆಳಗಾವಿ :   ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಧೃವೀಕರಣ ಆರಂಭಗೊಂಡಿದ್ದು, ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ.

ರಾಜಹಂಸಗಡದ ಅನೇಕ ಹಿರಿಯ ಬಿಜೆಪಿ ಮುಖಂಡರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಸಿದ್ಧಪ್ಪ ಗಣಪತ ಪವಾರ್, ಲಕ್ಷ್ಮಣ ಸಿದ್ಧಪ್ಪ ತೋರ್ವತ್, ರುಕ್ಮಣ್ಣ ಸಿದ್ಧಪ್ಪ ಹವಳ ಮೊದಲಾದವರು ಕಾಂಗ್ರೆಸ್ ಪಕ್ಷ ಸೇರಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಶಾಲು ಹಾಕಿ ಸ್ವಾಗತಿಸಿದರು. ಕಳೆದ 15 - 20 ವರ್ಷಗಳಿಂದ ತಾವು ಬಿಜೆಪಿಯಲ್ಲಿ ಕೆಲಸ ಮಾಡಿದ್ದು, ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕೈ ಬಸಪಡಿಸಬೇಕೆನ್ನುವ ಉದ್ಧೇಶದಿಂದ ಕಾಂಗ್ರೆಸ್ ಸೇರಿದ್ದಾಗಿ ಅವರು ತಿಳಿಸಿದರು.

 ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಕಾಡಾ ಅಧ್ಯಕ್ಷ ಯುವರಾಜ ಕದಂ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಶಂಕರಗೌಡ ಪಾಟೀಲ, ಮನೋಹರ ಬೆಳಗಾಂವಕರ್, ಗಾಯತ್ರಿ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಇದ್ದರು.









One attachment  •  Scanned by Gmail
















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್