LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ


ಶಿಮ್ಲಾ: ಇಲ್ಲಿನ ಸಂಜೌಲಿ ಪ್ರದೇಶದಲ್ಲಿ ಅನ್ಯ ಕೋಮಿನವರು ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಂಜೌಲಿಯಲ್ಲಿ ಪೊಲೀಸರು ಇಂದು ಬಿಎನ್​ಎಸ್​ ಸೆಕ್ಷನ್​ 163 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ. ಬೆಳಗ್ಗೆ 7ರಿಂದ ರಾತ್ರಿ 11.59ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನೂಪ್​ ಕಶ್ಯಪ್​ ತಿಳಿಸಿದ್ದಾರೆ.


ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜೌಲಿ ನಗರದಲ್ಲಿ ಯಾವುದೇ ಅನುಮತಿ ಇಲ್ಲದೇ ಘೋಷಣೆ, ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶವಿಲ್ಲ. ಶಸಾಸ್ತ್ರಗಳು ಹಾಗೂ ದಹನಶೀಲ ವಸ್ತುಗಳನ್ನು ಸಾಗಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


ಅಕ್ರಮವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಬೇಕು. ರಾಜ್ಯಕ್ಕೆ ಆಗಮಿಸುವ ಹೊರಗಿನವರ ನೋಂದಣಿ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.




ಈ ಕುರಿತು ಮಾತನಾಡಿರುವ ಸಿಎಂ ಸುಖ್ವೀಂದರ್​ ಸಿಂಗ್​ ಸುಖು, "ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಯಾವುದೇ ಸಮುದಾಯದಿಂದ ಯಾವುದೇ ಹಾನಿ ಆಗಬಾರದು. ಜನರು ಇದಕ್ಕೆ ಯಾವುದೇ ರಾಜಕೀಯ ಬಣ್ಣ ನೀಡದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು" ಎಂದು ಮನವಿ ಮಾಡಿದ್ದಾರೆ. (ಐಎಎನ್​ಎಸ್​)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್