LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲಕ್ಕುಂಡಿಯ ಗತವೈಭವ ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲಿ: ಸಚಿವ ಎಚ್.ಕೆ.ಪಾಟೀಲ


ಪಂಚ ದೇವಾಲಯಗಳ ಮತ್ತು ಪಂಚ ಬಾವಿಗಳ ಅನಾವರಣ


ಗದಗ  ಫೆ., 6 :  ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಲಕ್ಕುಂಡಿ ಉತ್ಕನನ ಕಾರ್ಯ ಆರಂಭಿಸಲಾಗಿದೆ. ಲಕ್ಕುಂಡಿಯ ಗತವೈಭವ ಅಂತರಾಷ್ಟಿçÃಯ ಮಟ್ಟದಲ್ಲಿ ಪಸರಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.


ಲಕ್ಕುಂಡಿಯ ಚೌಕಿಮಠದ ಆವರಣದಲ್ಲಿ ಶುಕ್ರವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾದಿಕಾರ ಗದಗ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿನ ಪಂಚ ದೇವಾಲಯಗಳ ಮತ್ತು ಪಂಚ ಬಾವಿಗಳನ್ನು ಅನಾವರಣಗೊಳಿಸಿ ಮಾತನಾಡಿದರು.



ಈ ಹಿಂದೆ ಲಕ್ಕುಂಡಿಯಲ್ಲಿ 10 ಪಲ್ಲಕ್ಕಿಗಳನ್ನು ತೆಗೆದುಕೊಂಡು ಲಕ್ಕುಂಡಿಯ ಪ್ರತಿ ಬೀದಿ ಬೀದಿಗೆ ಬಂದಾಗ ನೀವು ನಿಮ್ಮ ಮನೆಯಲ್ಲಿನ ಶಿಲ್ಪ, ವಾಸ್ತು, ಮುತ್ತು, ಹವಳ, ಆಯುಧಗಳನ್ನು ನೀಡಿದ್ದೀರಿ. ಲಕ್ಕುಂಡಿಯ ಜನರು ವಿಶಾಲ ಮನೋಭಾವವುಳ್ಳವರು. ಲಕ್ಕುಂಡಿಯ ಪ್ರಜ್ವಲ ರಿತ್ತಿ ಕುಟುಂಬದವರ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯು ಎಲ್ಲರೂ ಮೆಚ್ಚುವಂತಹದ್ದಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡ ರಿತ್ತಿ ಕುಟುಂಬದವರನ್ನು ಅಭಿನಂದಿಸಿದ್ದಾರೆ ಎಂದರು.


ಗಣರಾಜ್ಯೋತ್ಸವ ದಿನಾಚರಣೆಯಂದು ನಾವು ಹೇಳಿದಂತೆ ಲಕ್ಕುಂಡಿಯ ಪಂಚದೇವಾಲಯ, ಪಂಚ ಭಾವಿ ಅನಾವರಣ ಮಾಡಿದ್ದೇವೆ. ಉತ್ಖನನ ಕಾರ್ಯದಲ್ಲಿ ಶಿಲ್ಪಕಲೆ, ಪ್ರಾಚ್ಯಾವಶೇಷಗಳನ್ನು ಹೊರತಂದು ಲಕ್ಕುಂಡಿಯ ಗತವೈಭವ ಮರುಕಳಿಸುವಂತಾಗಬೇಕು. ಈ ಉತ್ಖನನ ಕಾರ್ಯ ಕೇವಲ ಆ ಸ್ಥಳದಲ್ಲಿನ ಬಂಗಾರ ಗುರುತಿಸುವುದಕ್ಕಲ್ಲ ಆದರೆ ಲಕ್ಕುಂಡಿಯಲ್ಲಿನ ಭವ್ಯ ಐತಿಹಾಸಿಕ, ಸಾಂಸ್ಕೃತಿಕ, ಶಿಲ್ಪಕಲೆಗಳನ್ನು ಪುನರುಜ್ಜೀವನಗೊಳಿಸುವುದಕ್ಕಾಗಿದೆ. ಇಲ್ಲಿನ 101 ಬಾವಿ ಹಾಗೂ 101 ದೇವಾಲಯಗಳನ್ನು ಗುರುತಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಸಿಕ್ಕಿರುವ ದೇವಾಲಯ, ಬಾವಿ ಪುನರುಜ್ಜೀವನ ನಡೆಸುತ್ತೇವೆ. ಈ ದೇವಾಲಯಗಳಿಗೆ ರಸ್ತೆ ಸಂಪರ್ಕ ಒದಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ತಪ್ಪು ಕಲ್ಪನೆಗಳನ್ನು ಬದಿಗಿಟ್ಟು ವಾಸ್ತವತೆಯನ್ನು ನಾಗರಿಕರು ಅರ್ಥ ಮಾಡಿಕೊಳ್ಳಬೇಕು. ಇತಿಹಾಸವನ್ನು ಹೆಕ್ಕಿ ತೆಗೆಯಲು ಸಹಕರಿಸಬೇಕು ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು.


ಪ್ರಾಧಿಕಾರದ ಕಚೇರಿಯಲ್ಲಿ ಒಂದು ರೆಜಿಸ್ಟರ್ ಹಾಗೂ ಕ್ಯಾಮರಾವನ್ನು ಇಡಲಾಗಿದ್ದು ಗ್ರಾಮಸ್ಥರು, ಹಿರಿಯರು, ಅನುಭವಿಕರು ಹೇಳುವ ಅಂಶಗಳನ್ನು ಇಲ್ಲಿ ದಾಖಲಿಸುವ ಕಾರ್ಯವಾಗಬೇಕು ಎಂದು ಸಚಿವರು ನಿರ್ದೇಶನ ನೀಡಿದರು.


ನರಗುಂದ ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ಲಕ್ಕುಂಡಿಗೆ ಹೊಸ ಸ್ವರೂಪ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಅನುದಾನ ನೀಡಿದ್ದಾರೆ. ಇದರೊಂದಿಗೆ ಗ್ರಾಮಸ್ಥರ ಸಹಕಾರವೂ ಸಹ ಇದೆ. ಎಂದೂ ಕಂಡಿಯರದ ಪ್ರಾಚ್ಯಾವಶೇಷದ ಉತ್ಖನನ ಕಾರ್ಯ ಇದಾಗಿದೆ ಎಂದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾದಿಕಾರ ರಾಜ್ಯ ಸಮಿತಿ ಸದಸ್ಯರಾದ ಸಿದ್ಧಲಿಂಗೇಶ್ವರ ಎಚ್ ಪಾಟೀಲ, ಅ.ಧ. ಕಟ್ಟಿಮನಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ಎ.ದೇವರಾಜ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ತೇಜೇಶ್ವರ ಸೇರಿದಂತೆ ಗಣ್ಯರು, ಪ್ರಮುಖರು, ಗ್ರಾಮದ ಹಿರಿಯರು ಹಾಜರಿದ್ದರು.


ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಶರಣು ಗೋಗೇರಿ ಸರ್ವರನ್ನು ಸ್ವಾಗತಿಸಿದರು.


ಅನಾವರಣಗೊಳಿಸಲಾದ ಪಂಚ ದೇವಾಲಯಗಳು :ವಿದ್ಯಾಶಂಕರಲಿAಗ ದೇವಾಲಯ, ಸೋಮನಕಟ್ಟಿ ಸೋಮಲಿಂಗೇಶ್ವರ ದೇವಾಲಯ, ಚೌಕಿಮಠದ ಈಶ್ವರ ದೇವಾಲಯ, ಚೌಕಿಮಠದ ಅರ್ಧ ನಾರೀಶ್ವರ ದೇವಾಲಯ, ಕಪ್ಪಚರಮಠ ಮತ್ತು ಬಾವಿ.


ಅನಾವರಣಗೊಳಿಸಲಾದ ಪಂಚಬಾವಿಗಳು :ಛಬ್ಬೇರ ಬಾವಿ, ಸಿದ್ದರಬಾವಿ, ಫಕ್ಕೀರಸ್ವಾಮಿ ಮಠದ ಬಾವಿ, ಚೌಕಿಮಠದ ಬಾವಿ, ಸೋಮನಕಟ್ಟಿ ಸೋಮಲಿಂಗೇಶ್ವರ ಬಾವಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್