LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ : ಗಣ್ಯರ ಕಂಬನಿ

ಹೈದರಾಬಾದ್‌: ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 88 ವರ್ಷವಾಗಿತ್ತು.

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು.ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ನಸುಕಿನ ಜಾವ ನಿಧನರಾಗಿದ್ದಾರೆ.




ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ರಾಮೋಜಿ ರಾವ್ ಅವರ ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಅವರು, ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು. ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ.








ಭಾರತ ಮಾಧ್ಯಮ ಲೋಕದಲ್ಲಿ ದೂರದೃಷ್ಟಿ ಹೊಂದಿದ್ದ ರಾಮೋಜಿ ರಾವ್ ಅವರ ನಿಧನ ತೀವ್ರ ದುಃಖವನ್ನುಂಟುಮಾಡಿದೆ. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರ ಗಮನಾರ್ಹ ಪ್ರಯತ್ನಗಳ ಮೂಲಕ ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಯಲ್ಲಿ ಹೊಸ ಮಾನದಂಡಗಳನ್ನು ಸೃಷ್ಟಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಇನ್ನೂ ಹಲವು ಗಣ್ಯರು ರಾಮೋಜಿ ರಾವ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

 



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್