LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಕ್ರಮ ದಂಧೆಗಳಿಗೆ  ಕಡಿವಾಣ ಹಾಕಿ - ಮೀನಳ್ಳಿ ತಾಯಣ್ಣ





ಬಳ್ಳಾರಿ, ಜ.22: ತಾಲೂಕಿನ ಮೋಕ ಬಳಿ ಅಕ್ರಮ ಮರಳು ದಂಧೆಗೆ ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ.ಅವರ ನೇತೃತ್ವದ ತಂಡ ಕಡಿವಾಣ ಹಾಕಿದ್ದು, ಸ್ವಾಗತಾರ್ಹ. ಆದರೆ, ಇದು ನೆಪಕ್ಕೆ ಆಗಬಾರದು, ಸಂಪೂರ್ಣ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮರಳು ದಂಧೆ ಜೊತೆಗೆ ಮಟಕ, ಜೂಜು, ಇಸ್ಪೀಟ್, ಡ್ರಗ್ಸ್ ದಂಧೆ, ಗಾಂಜಾ ಸೇರಿದಂತೆ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಸಾಮಾನ್ಯವಾಗಿದೆ, ಇವೆಲ್ಲವುಗಳನ್ನು ಕಡಿವಾಣ ಹಾಕಿ ಇತರರಿಗೆ ಅಧಿಕಾರಿಗಳು ಮಾದರಿಯಬೇಕು. ನೂತನ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಹಾಗೂ ಬಳ್ಳಾರಿ ವಲಯದ ನೂತನ ಐಜಿಪಿ ಡಾ.ಹರ್ಷ ಅವರು ಅಧಿಕಾರ ಸ್ವೀಕರಿಸಿದ್ದು, ಬಳ್ಳಾರಿ ನಗರ ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕುವ ವಿಶ್ವಾಸವಿದೆ. ಬಳ್ಳಾರಿಯಲ್ಲಿ ಶಾಂತಿ ನೆಲೆಸಬೇಕು, ಬಳ್ಳಾರಿ ಅಕ್ರಮ ದoಧೆಗಳಿಂದ ಮುಕ್ತವಾಗಬೇಕು ಎಂಬುದು ನಮ್ಮ ಕಳಕಳಿ. ಹಗರಿ ನದಿ ಸೇರಿದಂತೆ ನಾನಾ ಕಡೆ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. 1 ಗಾಡಿಗೆ ಪರವಾನಿಗೆ ಪಡೆದು ಮೂರ್ನಾಲ್ಕು ಗಾಡಿಗಳ ಮೂಲಕ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಉದಾಹರಣೆಗಳಿದ್ದರು ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು, ಇದರ ಜೊತೆಗೆ ನಿಗದಿಗಿಂತ ಹೆಚ್ಚು ಭಾರ ಹಾಕಿ ಲಾರಿಗಳಲ್ಲಿ ಸಾಗಣೆ ಮಾಡುವದಿರಿಂದ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ, ಈ ಹಿಂದೆ ಅಕ್ರಮ ಅಕ್ಕಿ ದಂಧೆಕೋರರ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಉದಾಹರಣೆ ಇದ್ದರು ಅಧಿಕಾರಿಗಳು ಕಡಿವಾಣಕ್ಕೆ ಮುಂದಾಗಿಲ್ಲ.

ಸಂಡೂರು ತಾಲೂಕಿನ ಎನ್ ಎಂ ಡಿಸಿ ಒಡೆತನದ ಕುಮಾರಸ್ವಾಮಿ ಗಣಿ ಗುತ್ತಿಗೆ ಪ್ರದೇಶದಿಂದ ಅಕ್ರಮವಾಗಿ ನೆರೆಯ ನೇಮ್ ಕಲ್ ಸೇರಿದಂತೆ ನಾನಾ ಕಡೆ ನಮ್ಮ ಗಣಿ ಸಂಪತ್ತನ್ನು ಸಾಗಣೆ ಮಾಡಲಾಗುತ್ತಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕಿದ್ದರು ಕ್ರಮಕ್ಕೆ ಮುಂದಾಗಿಲ್ಲ. ಕೂಡಲೇ ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳು, ಪೋಲೀಸ್ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್