LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಏಡ್ಸ್ ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.

ಸೋಮವಾರ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ.

ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.

ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ, ಅವರನ್ನು ಮಾನವೀಯತ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ಅಲ್ಲಿ ನೀಡುತ್ತಿರುವ ಚಿಕಿತ್ಸೆ, ಥೆರಪಿಗಳಿಂದಾಗಿ ಇಳಿಕೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಎಚ್‌ಐವಿ/ಏಡ್ಸ್‌ ಪತ್ತೆಯೇ ಇಲ್ಲ ಎಂದು ಆಗುವವರೆಗೆ ಕೆಲಸ ಮಾಡಬೇಕು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್