LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೈತರ ಮನವಿ ಸ್ವೀಕರಿಸದ ಸಚಿವ ಗುಂಡೂರಾವ್‌ ಕಾರಿಗೆ ಮುತ್ತಿಗೆ


 ಹುಕ್ಕೇರಿ :9 ನಗರದಲ್ಲಿ ಇವತ್ತು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಇವರು ತಾಲೂಕಿನ ಸಂಕೇಶ್ವರ, ಅಮ್ಮಣಗಿ, ಹುಕ್ಕೇರಿ ನಗರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ವಿವಿಧ ಸರಕಾರಿ  ಕಾಮಗಾರಿಗಳಿಗೆ ಉದ್ಘಾಟನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಹುಕ್ಕೇರಿ ನಗರದ ತಾಲೂಕು ಆಸ್ಪತ್ರೆಯ ಅವ್ಯವಸ್ಥೆ ಕುರಿತು ಮಾನ್ಯ ಸಚಿವರ ಗಮನಕ್ಕೆ ತರಲು ಮನವಿ ನೀಡಲು ಮುಂದಾದಾಗ ಸಚಿವರು ತಮ್ಮ ಉದ್ಧಟತನವನ್ನು ಮೆರೆದು ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಆಲಿಸದೆ ಅವರ ಮನವಿಯನ್ನು ಸ್ವೀಕರಿಸದೆ ಹೋಗಿರುವುದು ರೈತರ ಕೆಂಗಣ್ಣಿಗೆ ಕಾರಣವಾಗಿದೆ. ಸಂದರ್ಭದಲ್ಲಿ ರೈತರು ಸಚಿವರ್ ಕಾರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು  ಈ ಕುರಿತು ಮಾತನಾಡಿದ ಸಂಘಟನೆಯ ತಾಲೂಕ ಅಧ್ಯಕ್ಷರ ಸಂಜು ಹಾವನ್ನವರ ರೈತ ವಿರೋಧಿ ಆರ್ ಗುಂಡುರಾವ್ ಅವರು ಅವರ ಅವಧಿಯಲ್ಲಿ ನಿಪ್ಪಾಣಿಯ ರೈತರ ತಂಬಾಕು ಆಂದೋಲನದಲ್ಲಿ ಗೋಲಿಬಾರ್ ಮಾಡಿಸುವ ಮೂಲಕ ಅವರ ರೈತ ವಿರೋಧಿಯನ್ನು ತೋರಿದ್ದರು  ಇವತ್ತು ದಿನೇಶ್ ಗುಂಡೂರಾವ್ ಅವರು ರೈತರ ಸಮಸ್ಯೆಯ ಮನವಿಯನ್ನು ಸ್ವೀಕರಿಸದೆ ತಮ್ಮ ರೈತ ವಿರೋಧಿ ನೀತಿಯನ್ನು ತೋರಿದ್ದಾರೆ ಎಂದು 30 40 ವರ್ಷಗಳ ಹಿಂದಿನ ಕಹಿ ಘಟನೆಯನ್ನು ಮತ್ತೊಮ್ಮೆ ಸ್ಮರಿಸಿದರು  ರೈತರ ಕಷ್ಟಗಳಿಗೆ ಸ್ಪಂದಿಸದ ಸಚಿವರ ರೈತ ವಿರೋಧಿ ನೀತಿಗೆ ಧಿಕ್ಕಾರ ತಿಳಿಸಿ ತಮ್ಮ ಆಕ್ರೋಶ ಹೊರ ಹಾಕಿದರು ಅಲ್ಲದೆ ಇದು ರೈತರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ ಸರ್ಕಾರದ ರೈತ ವಿರೋಧಿ ನೀತಿ ಬಗ್ಗೆ ಇನ್ನು ಮುಂದೆ ರಾಜ್ಯದ ಮೂಲೆ ಮೂಲೆಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕಿನ ನೂರಾರು ಜನ ರೈತರು ಉಪಸ್ಥಿತರಿದ್ದು ಬೆಂಬಲವನ್ನು ಸೂಚಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್