LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ




ಬೆಂಗಳೂರು : ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರಕ್ಕೆ ಸಿಕ್ಕ ಗೆಲುವು ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವರು ಹೇಳಿದ್ದಾರೆ.


ಉಪಚುನಾವಣೆ ಫಲಿತಾಂಶದ ಮೂಲಕ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮೂರು ಕ್ಷೇತ್ರಗಳ ಮತದಾರರು ಅಭಿವೃದ್ಧಿ ಕಾರ್ಯಗಳಿಗೆ ಮತ ಹಾಕಿದ್ದು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ವಿರೋಧ ಪಕ್ಷಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದಿದ್ದಾರೆ.


 *ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಸಚಿವರಿಂದ ಪ್ರಚಾರ*

ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಕುಂದೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ಕೈಗೊಂಡಿದ್ದರು. ಐದು ದಿನಗಳ ಕಾಲ ಪ್ರಚಾರ ನಡೆಸಿದ ಸಚಿವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ, ಅಭಿವೃದ್ಧಿ ಯೋಜನೆಗಳ ಬಗ್ಗೆ ತಮ್ಮ ಭಾಷಣದ ಮೂಲಕ ಜನರಿಗೆ ತಿಳಿಹೇಳಿದ್ದರು‌.


ಉಪ ಚುನಾವಣಾ ಫಲಿತಾಂಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರ ಕೈ ಮತ್ತಷ್ಟು ಬಲಗೊಂಡಿದ್ದು,‌ ಈ ಫಲಿತಾಂಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್