LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖಾನಾಪೂರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯಲ್ಲಿರುವ ಖಾನಾಪೂರ ತಾಲೂಕಿನ ಮಲಪ್ರಭಾ ಬ್ರಿಡ್ಜ್ ಮತ್ತು ರುಮೇವಾಡಿ ಬ್ಯಾರೇಜ್ ವೀಕ್ಷಿಸಿ, ಪ್ರವಾಹದಿಂದ ನಾಶವಾಗಿರುವ ಮನೆ, ಬೆಳೆ ಹಾಗೂ ಬ್ರಿಡ್ಜ್ ಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.


ಖಾನಾಪೂರ ತಾಲೂಕಿನ ಪಶ್ಚಿಮಘಟ್ಟಗಳ ಪ್ರದೇಶದಲ್ಲಿರುವ ಗುಡ್ಡದ ಮಧ್ಯೆಯದಲ್ಲಿರುವ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನಮ್ಮ ಉದ್ದೇಶ. ಮುಂದಿನ ದಿನಗಳಲ್ಲಿ ಮಳೆಯಿಂದ ಜೀವಹಾನಿಯಾಗದಂತೆ ಕ್ರಮಕೈಗೊಳ್ಳಲಾಗುವುದು. ಅರಣ್ಯ‌ ಇಲಾಖೆಯ ಕಠಿಣ ನಿಲುವುಗಳಿಂದ ಕೆಲ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಲು ಸಾಧ್ಯವಾಗುತ್ತಿಲ್ಲ ಎಂದರು.


 ಮನೆ ಬಿದ್ದ ತಕ್ಷಣ 1.20 ಲಕ್ಷ ರೂಪಾಯಿ ಹಣ, ಜೊತೆಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1.80 ಲಕ್ಷ ಹಣ ನೀಡಲಾಗುತ್ತಿದ್ದು, ಭಾಗಶಃ ಬಿದ್ದ  ಮನೆಗೆ ನೀಡಲಾಗುತ್ತಿರುವ ಮೊತ್ತವನ್ನು 10 ಸಾವಿರ‌ ರೂಪಾಯಿಂದ  50 ಸಾವಿರ ರೂಪಾಯಿಗೆ ಏರಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


ಮಳೆಗಾಲದ ವೇಳೆ ಬೆಳಗಾವಿ - ಗೋವಾ ನಡುವಿನ ಮುಖ್ಯ ರಸ್ತೆ ಜಾಮ್ ಆಗುತ್ತಿದ್ದು, ಶೀಘ್ರವೇ ಗೋವಾ ಮುಖ್ಯ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದ್ದು, 100 ಕೋಟಿ ವೆಚ್ಚದಲ್ಲಿ ಹಟ್ಟಿಹೊಳಿ ಬ್ರಿಡ್ಜ್ ನಿರ್ಮಾಣವಾಗಲಿದೆ ಎಂದು‌ ಹೇಳಿದರು.


ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪಾದಯಾತ್ರೆ ಮಾಡುತ್ತಿರುವ ಪ್ರತಿಯೊಬ್ಬರಿಗೂ ಶುಭಾಶಯಗಳು, ಮಳೆ ಬರುತ್ತಿರುವ ಕಾರಣ ಒಳ್ಳೆಯ ಶೂ, ರೈನ್ ಕೋಟ್ ತೆಗೆದುಕೊಂಡು ಹೋಗಲಿ ಎಂದು ಸಚಿವರು ಹೇಳಿದರು.


ಈ ವೇಳೆ ಸ್ಥಳೀಯ ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ್, ನೀರಾವರಿ ಹಾಗೂ ಕಂದಾಯ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್