LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ವರ ಒಗ್ಗಟ್ಟಿನಿಂದಲೇ ಮೂರು ಕ್ಷೇತ್ರಗಳಲ್ಲಿ ಗೆಲುವು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ನಮ್ಮ ಅಭ್ಯರ್ಥಿಗಳನ್ನು  ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಸಾಧಿಸಿದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಗೆಲುವಿಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿದಂತೆ ಸಚಿವರು, ಶಾಸಕರು, ಕಾರ್ಯಕರ್ತರು ಒಗ್ಗಟ್ಟಾಗಿದ್ದರಿಂದ ನಮ್ಮ ಅಭ್ಯರ್ಥಿಗಳಿಗೆ ಗೆಲುವಾಗಿದೆ ಎಂದು ತಿಳಿಸಿದರು.


ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ನಾವು ಗೆಲ್ಲಲು ಆಗಲ್ಲ. ಸಂಡೂರು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಲು ಸಾಧ್ಯವಿದೆ ಎಂದು ಸರ್ವೇಗಳಲ್ಲಿ, ಮುಖಂಡರ ಭಾವನೆ ಆಗಿತ್ತು. ಶಿಗ್ಗಾಂವಿಯಲ್ಲಿ ಐದು ಬಾರಿ ಸೋಲಲು ನಾಯಕತ್ವದ ಕೊರತೆ ಇತ್ತು. ಆದರೆ ಸಚಿವ ಶಿವಾನಂದ ಪಾಟೀಲ್‌, ನಾವು ಸೇರಿದಂತೆ ಅನೇಕರು ಹಿಂದೂ-ಮುಸ್ಲಿಂ ಭಾವನೆಯನ್ನು ಹೊಗಲಾಡಿಸಿ, ಅಹಿಂದ ಮತಗಳನ್ನು ಒಗ್ಗೂಡಿಸಿದ್ದರಿಂದ ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ  ಗೆಲುವಿಗೆ ಅನುಕೂಲವಾಯಿತು ಎಂದರು.


ಪ್ರತಿ ಚುನಾವಣೆಯಲ್ಲಿ ಧಾರ್ಮಿಕ ಭಾವನೆಗಳನ್ನು ಇಟ್ಟುಕೊಂಡು ಬಿಜೆಪಿಯವರು ಚುನಾವಣೆ ಗೆಲ್ಲುತ್ತಿದ್ದರು. ಆದರೆ ಈ ಬಾರಿ ನಮ್ಮ ಕಾರ್ಯಕರ್ತರು ಅದಕ್ಕೆ ಅವಕಾಶ ನೀಡಲಿಲ್ಲ. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವಾಗಿದೆ. ಚಿಕ್ಕೋಡಿಯಲ್ಲಿ ಗೆದ್ದ ಹಾಗೆ ಶಿಗ್ಗಾಂವಿಯನ್ನು ಗೆದ್ದಿದ್ದೇವೆ. ನಮ್ಮ ಚುನಾವಣೆ ಮಾಡಿದ ಹಾಗೇ ಮತ್ತೊಬ್ಬರ ಚುನಾವಣೆ ಮಾಡಬೇಕು. ಅಂದಾಗ ಮಾತ್ರ ಗೆಲುವು ಸಾಧ್ಯವಿದೆ. ಶಿಗ್ಗಾಂವಿ ಕ್ಷೇತ್ರದ ಉಸ್ತುವಾರಿಯಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿದ್ದರಿಂದ ನನಗೂ ಡಬಲ್‌ ಪ್ರಮೋಶನ್‌ ಸಿಕ್ಕಿದೆ ಎಂದು ಹೇಳಿದರು.


ಇವಿಎಂನಲ್ಲಿ ಅಡ್ಜಸ್ಟ್‌ಮೆಂಟ್‌ ಮಾಡ್ತಿದ್ದಾರೆ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕೆ ಸೋಲಾದ ಬೆನ್ನಲ್ಲೇ ಇವಿಎಂ ಮೇಲೆ ಸಚಿವ ಸತೀಶ್‌ ಜಾರಕಿಹೊಳಿ ಸಂಶಯ ವ್ಯಕ್ತಪಡಿಸಿದರು.


ಇವಿಎಂ ಮಷೀನ್ ಇರುವವರೆಗೂ ಈ ರೀತಿ ಎಲ್ಲಾ ಆಗುತ್ತದೆ. ಇವಿಎಂ ಬಗ್ಗೆ ಸಾಕಷ್ಟು ಅನುಮಾನ ಇದೆ. ಸಾಕಷ್ಟು ಕಡೆಗಳಲ್ಲಿ ಇವಿಎಂ ಬಗ್ಗೆ ಚರ್ಚೆ ಆಗುತ್ತಿದೆ. ಒಂದು ಕಡೆ ಕೊಡ್ತಾರೆ, ಇನ್ನೊಂದು ಕಡೆ ಕಸಿದುಕೊಳ್ತಾರೆ. ಜಮ್ಮು ನಮಗೆ ಕೊಟ್ಟರೂ, ಹರಿಯಾಣವನ್ನು ಬಿಜೆಪಿಯವರು ತೆಗೆದುಕೊಂಡರು. ಈ ರೀತಿ ಗೀವ್ & ಟೆಕ್ ಪಾಲಿಸಿ ಮಾಡ್ತಿದ್ದಾರೆ. ಅವರಿಗೆ ಬೇಕಾದದ್ದನ್ನು ತೆಗೆದುಕೊಳ್ತಾರೆ, ಬೇಡದ್ದನ್ನ ಬಿಡ್ತಾರೆ. ಇವಿಎಂನಲ್ಲೂ ಅಡ್ಜಸ್ಟ್ಮೆಂಟ್ ಇದೆ ಎಂದು ಅವರು ಗಂಭೀರ ಆರೋಪ ಮಾಡಿದರು.‌


ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಮುಖಂಡರಾದ ಸಿದ್ದಿಕ ಅಂಕಲಗಿ, ಸೈಯದ್ ಮನ್ಸೂರ್, ರಾಜಾ ಸಲೀಂ,  ಅರುಣ ಕಟಾಂಬಳೆ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್