LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಶಾಲೆ ಭೇಟಿ; ಸಮಸ್ಯೆಗಳ ಪರಿಶೀಲನೆ


ಬಳ್ಳಾರಿ,ಜೂ.01 : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರು ಮಂಗಳವಾರ ನಗರದ ಎಪಿಎಂಸಿ ಈದ್ಗಾ ಸಮೀಪದ ಸರ್ಕಾರಿ ಹಿರಿಯ ಉರ್ದು ಪ್ರೌಢಶಾಲೆ ಹಾಗೂ ಕೌಲ್ ಬಜಾರ್ ತರಬೇತಿ ಶಾಲೆಗೆ ಭೇಟಿ ನೀಡಿ ಶಾಲಾ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಭೇಟಿ ವೇಳೆ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯಿAದ ಶಾಲೆಯಲ್ಲಿರುವ ವಿವಿಧ ಸಮಸ್ಯೆಗಳು, ಮೂಲಸೌಕರ್ಯದ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಆಲಿಸಿದರು.
ಶಾಲೆಯ ತರಗತಿ ಕೊಠಡಿಗಳು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳು ಮತ್ತು ಗ್ರಂಥಾಲಯವನ್ನು ಖುದ್ದಾಗಿ ವೀಕ್ಷಿಸಿದ ಅಧ್ಯಕ್ಷರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಶಿಕ್ಷಕರಿಗೆ ಸೂಚಿಸಿದರು.
ಕಟ್ಟಡದ ಸ್ಥಿತಿಗತಿ, ತರಗತಿ ಕೊಠಡಿಗಳು ಹಾಗೂ ಶಾಲಾ ಪರಿಸರವನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಶಾಲೆಯಲ್ಲಿ ಕಂಡುಬAದಿರುವ ಕೊಠಡಿಗಳ ಕೊರತೆ ಮತ್ತು ಸ್ವಚ್ಛತೆಯ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು. ಈ ಕುರಿತು ಸಂಬAಧಪಟ್ಟ ಅಧಿಕಾರಿಗಳಿಗೆ ಹಾಗೂ ಶಿಕ್ಷಣ ಇಲಾಖೆಗೆ ಶೀಘ್ರದಲ್ಲೇ ವರದಿ ಸಲ್ಲಿಸಿ, ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸಮುದಾಯದ ರಾಜ್ಯಾಧ್ಯಕ್ಷ ದಾದಾ ಭಾಯ್, ಜಿಲ್ಲಾಧ್ಯಕ್ಷ ಡಿ.ಅಯಾಜ್, ಬುಡಾ ಮಾಜಿ ಅಧ್ಯಕ್ಷ ಮೋಹಿನ್ ಖಾನ್, ಕ್ರಿಶ್ಚಿಯನ್ ಸಮುದಾಯದ ಮುಖ್ಯಸ್ಥ ಜಾಶ್ವಾ, ಮುಖಂಡ ಕಣೇಕಲ್ ಮಾಬುಸಾಬ್, ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿ ರಾಜು ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್