LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಆಪರೇಷನ್ ಸಿಂದೂರ್ ಯಶಸ್ವಿ; ಭಾರತೀಯ ಮೂರ ಸೇನೆಗಳಿಗೆ ಭಾರತೀಯರ ಪರವಾಗಿ ಮೋದಿ ಧನ್ಯವಾದ

ನವದೆಹಲಿ, (ಮೇ 13) : ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಮತ್ತು ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತದ ದಾಳಿ ಸೇರಿದಂತೆ ಹಲವು ವಿಷಯಗಳು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತಾಡಿದರು. ಈ ವಳೆ ಹಲವಾರ ವಿಚಾರಗಳ ಬಗ್ಗೆ ತಿಳಿಸಿದ್ದು, ಅದರಲ್ಲೂ ಮುಖ್ಯವಾಗಿ ಈ ಆಪರೇಷನ್ ಸಿಂದೂರವನ್ನು ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಭಾರತೀಯ ಮೂರು ಸೇನೆಗಳು, ತಂತ್ರಜ್ಞರು ಮತ್ತು ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.









ಡ್ರೋನ್ ಮತ್ತು ಕ್ಷಿಪಣಿ ದಾಳಿಯೂ ಭಯೋತ್ಪಾದಕ ಚಟುವಟಿಕೆ ಎಂದು ಹೇಳಿದರು. ಭಯೋತ್ಪಾದಕ ಪ್ರಧಾನ ಕಚೇರಿಯನ್ನೇ ಭಾರತ ನೆಲಸಮಗೊಳಿಸಿದೆ. ಉಗ್ರರ ವಿದ್ಯಾಲಯಗಳಾಗಿದ್ದ ತಾಣಗಳನ್ನು ಭಾರತ ಉಡೀಸ್ ಮಾಡಿದೆ. ಭಾರತ ಪ್ರತೀಕಾರದಿಂದ ಪಾಕಿಸ್ತಾನ ಕಂಗಾಲು ಆಗಿತ್ತು. ಭಯೋತ್ಪಾದನೆ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ಭಾರತದ ಶಾಲಾ ಕಾಲೇಜು, ಮಸೀದಿ, ಗುರುದ್ವಾರ, ಚರ್ಚ್, ನಾಗರೀಕರ ನಿವಾಸಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಪಾಕ್‌ನಿಂದ ಹಾರಿ ಬಂದ ಡ್ರೋನ್‌ಗಳನ್ನು ಆಕಾಶದಲ್ಲಿಯೇ ಭಾರತ ನಾಶ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.

ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಾಕ್ ಸೊಕ್ಕನ್ನು ಅಡಗಿಸಲಾಗಿದೆ. ಭಾರತ ಪ್ರತೀಕಾರಕ್ಕೆ ಬೆಚ್ಚಿದ ಪಾಕಿಸ್ತಾನ ಹಲವು ರಾಷ್ಟ್ರಗಳ ಮುಂದೆ ಹೋಗಿತ್ತು. ಭಾರತದ ಡಿಸಿಎಂಒಗೆ ಕರೆ ಮಾಡುವ ಮುನ್ನವೇ ಪಾಕಿಸ್ತಾನದ ಮೇಲೆ ದಾಳಿ ನಡೆಸಲಾಗಿತ್ತು ಎಂದು ಹೇಳಿದ ಮೋದಿ, ಭಾರತೀಯ ಮೂರು ಸೇನೆಗಳು, ತಂತ್ರಜ್ಞರು ಮತ್ತು ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್