LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೆಟ್ರೋ ಸ್ಟೇಷನ್​​ಗೆ ಪುನೀತ್ ಹೆಸರಿಡಲು ಮೋದಿ ಸಕಾರಾತ್ಮಕ ಪ್ರತಿಕ್ರಿಯೆ

ಬೆಂಗಳೂರು, ಜೂನ್ 10: ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ  ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡಲು ಒತ್ತಡ ಹೆಚ್ಚಾಗಿದೆ.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಈಗಾಗಲೇ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್​ಸಿಎಲ್ ಉತ್ತರ ನೀಡಿದೆ. ಈಗಾಗಲೇ ಈ ಮಾರ್ಗದ ಕಾಮಗಾರಿ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಪುನೀತ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಪುನೀತ್ ರಾಜ್​​ಕುಮಾರ್ ಹೆಸರಿಡುವಂತೆ ಪ್ರಧಾನಿ, ಸಿಎಂ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಮೆಟ್ರೋ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್