LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮುಂಗಾರು ಬೆಳೆ ಸಮೀಕ್ಷೆ: ಖಾಸಗಿ ನಿವಾಸಿಗಳಿಗೆ ತರಬೇತಿ


ಹುನಗುಂದ; ಬೆಳೆ ಸಮೀಕ್ಷೆಯ ಮಹತ್ವ, ರೈತರ ಜಮೀನುಗಳ ನಿಖರ ಮಾಹಿತಿ ಸಂಗ್ರಹಣೆ, ಬೆಳೆ ವಿವರಗಳ ದಾಖಲಾತಿ, ಮೊಬೈಲ್ ಆಪ್ ಬಳಕೆ, ಜಿಪಿಎಸ್ ಆಧಾರಿತ ಸ್ಥಳ ಗುರುತಿಸುವಿಕೆ, ಭೂ ದಾಖಲೆಗಳಿಗೆ ಅನುಗುಣವಾಗಿ ಬೆಳೆ ಮಾಹಿತಿಯನ್ನು ದಾಖಲಿಸುವ ವಿಧಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಖಾಸಗಿ ನಿವಾಸಿಗಳು ಮಾಹಿತಿಯನ್ನು ಕಡ್ಡಾಯವಾಗಿ ಹೊಂದಿರಬೇಕೆಂದು ತಹಸೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.                                              ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು.
ಇಲ್ಲಿನ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಸೋಮವಾರ ಕೃಷಿ ಇಲಾಖೆ ನಡೆಸಿದ ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಕೃಷಿ ಇಲಾಖೆಯ ವತಿಯಿಂದ ಖಾಸಗಿ ನಿವಾಸಿಗಳಿಗೆ ಮತ್ತು ಮೇಲ್ವಿಚಾರಕರಿಗೆ ನೀಡುವ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ ರೈತರಿಗೆ ಸರ್ಕಾರದ ಬೆಳೆ ವಿಮೆ, ಬೆಳೆ ಪರಿಹಾರ, ವಿವಿಧ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಅಂಕಿಅಂಶಗಳ ಸಿದ್ಧತೆಗೆ ಬೆಳೆ ಸಮೀಕ್ಷೆಯ ಮಾಹಿತಿ ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ತಪ್ಪು ಮಾಹಿತಿಗೆ ಅವಕಾಶ ನೀಡದೇ ನಿಖರವಾಗಿ ಸಮೀಕ್ಷೆ ನಡೆಸಬೇಕೆಂದು ಅವರು ತಿಳಿಸಿದರು. ವಂತೆ ತರಬೇತಿ ಪಡೆದ ಸಿಬ್ಬಂದಿಗೆ ಸೂಚಿಸಲಾಯಿತು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀಮತಿ ಗೌರಮ್ಮ ಸುಂಕದ ಮಾತನಾಡಿ ಸಮೀಕ್ಷೆ ವೇಳೆ ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ಬಿತ್ತಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ಸ್ಥಳದಲ್ಲಿಯೇ ಪರಿಶೀಲಿಸಿ ದಾಖಲಿಸಬೇಕು. ಯಾವುದೇ ಅನುಮಾನಗಳು ಕಂಡುಬಂದಲ್ಲಿ ಸಂಬಂಧಿಸಿದ ಕೃಷಿ ಅಧಿಕಾರಿಗಳ ಮಾರ್ಗದರ್ಶನ  ಮತ್ತು ಮಾಹಿತಿ ಪಡೆದು ಅಂತಿಮಗೊಳಿಸುವಂತೆ ತಿಳಿಸಿದರು.  ಈ ವೇಳೆ ಕೃಷಿ ಇಲಾಖೆ ಅಧಿಕಾರಿ ಬಸವರಾಜ ಟಕ್ಕಳಗಿ ಮಾಹಿತಿ ನೀಡುತ್ತ ಬೆಳೆ ಸಮೀಕ್ಷೆಯು ಸರ್ಕಾರದ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಮೂಲಾಧಾರವಾಗಿದೆ. ತರಬೇತಿ ಪಡೆದ ಸಿಬ್ಬಂದಿ ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ರೈತರಿಗೆ ನಿಖರವಾದ ಸೌಲಭ್ಯಗಳು ದೊರೆಯಲಿವೆ. ರೈತರ ಕಿರಿಕಿರಿ ಜಮೀನು ದೂರವಿದೆ ಯಾವುದ ಅನ್ಯ ನೆಪ ಹೇಳದೆ ಬೆಳೆ ಸಮೀಕ್ಷೆ ಕಾರ್‍ಯ ನಡೆಸಬೇಕು. ಸಮೀಕ್ಷೆ ನಡೆಸುವಾಗ ಮಾಜಹಿತಿ ತಿಳಿಯದಿದ್ದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಸಂಪರ್ಕಿಸಿ ಸಮೀಕ್ಷೆ ಪೂರ್ಣಗೊಳಿಸಬೇಕೆಂದು ಅವರು ಖಾಸಗಿ ನಿವಾಸಿಗಳಿಗೆ ಸೂಚಿಸಿದರು. ತರಬೇತಿ ಪಡೆದ ಖಾಸಗಿ ನಿವಾಸಿಗಳು ತಮ್ಮ ವೇತನದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀವ್ರಗತಿಯಲ್ಲಿ ವೇತನ ನೀಡುವಂತೆ ಮನವಿ ಮಾಡಿದರು.
ಸಹಾಯಕ ಸಾಂಖ್ಯಿಕ ಅಧಿಕಾರಿಮಹಿಬೂಬ ಇನಾಮದಾರ, ಕಂದಾಯ ಇಲಾಖೆಯ ನಿರೀಕ್ಷಕ ಡಿ.ಎಸ್. ಯತ್ನಟ್ಟಿ ಇದ್ದರು. ತರಬೇತಿ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿಯಿಂದ ಬೆಳೆ ಸಮೀಕ್ಷೆಗೆ ಆಯ್ಕೆಯಾದ ಖಾಸಗಿ ನಿವಾಸಿಗಳು ಭಾಗವಹಿಸಿ, ಸಮೀಕ್ಷೆ ಕಾರ್ಯದ ಕುರಿತು ತಮ್ಮ ಸಂದೇಹಗಳಿಗೆ ಸ್ಪಷ್ಟನೆ ಪಡೆದುಕೊಂಡರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್