LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

5 ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮುಂಗಾರು ಆರಂಭ

ಬೆಂಗಳೂರು: ಈ ಬಾರಿ ಬೇಸಿಗೆ ಕಾಲ ಬೇಗನೆ ಮುಗಿಯುತ್ತಿದ್ದು, 5 ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ 1 ರಂದು ನೈಋತ್ಯ ಮಾರುತ ಕೇರಳವನ್ನು ಪ್ರವೇಶಿಸಿದರೆ, ಜೂನ್ 8ರೊಳಗೆ ಇಡೀ ದೇಶವನ್ನ ಆವರಿಸುತ್ತಿತ್ತು. ಆದರೆ, ಈ ಬಾರಿ 5 ದಿನ ಮುಂಚಿತವಾಗಿ ಮುಂಗಾರು ಮಳೆ ಆರಂಭವಾಗುತ್ತಿದೆ.

ಮುಂಗಾರು 5 ದಿನದ ಮುಂಚಿತವಾಗಿ ಬರುತ್ತಿರುವುದು ಕಳೆದ 16 ವರ್ಷದ ಬಳಿಕ ಇದೇ ಮೊದಲಾಗಿದೆ. 2009ರಲ್ಲಿ ಮೇ.23 ರಂದು ಇದೇ ರೀತಿಯಲ್ಲಿ ಮುಂಗಾರು 5 ದಿನಗಳ ಮುಂಚೆ ಆರಂಭವಾಗಿತ್ತು. ಈ ಬಾರಿ ಮೇ 27ರಂದು ಆರಂಭವಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ.28ರಂದು ಕರ್ನಾಟಕದಲ್ಲಿ ಮುಂಗಾರು ಆಗಮನವಾಗಲಿದ್ದು, ಈ ವರ್ಷ ಸಾಮಾನ್ಯಕ್ಕಿತ ಹೆಚ್ಚಿನ ಮಳೆಯಾಗುವ ನಿರೀಕ್ಷೆಗಳಿವೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಆದರೆ ,ರಾಜ್ಯದ ಇತರ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್