LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.


ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ. ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ.


7,05,538 ಮತಗಳನ್ನು ಪಡೆದಿದ್ದ ಬಸವರಾಜ ಬೊಮ್ಮಾಯಿ ಅವರು, 43,513 ವೋಟ್​ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಜಯಿಸಿದ್ದರು. ಗಡ್ಡದೇವರಮಠ ಅವರು 6,62,025 ಮತ ಪಡೆದು ತೀವ್ರ ಪೈಪೋಟಿ ನೀಡಿದ್ದರು.


ಬೊಮ್ಮಾಯಿ ಗೆಲುವಿನೊಂದಿಗೆ ಹಾವೇರಿ - ಗದಗ ಕ್ಷೇತ್ರದಲ್ಲಿ ಬಿಜೆಪಿ ಪಾರಮ್ಯ ಮುಂದುವರೆದಿದೆ. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯ ಬಳಿಕ ಶಿವಕುಮಾರ್ ಚನ್ನಬಸಪ್ಪ ಉದಾಸಿ ಸತತವಾಗಿ ಗೆದ್ದಿದ್ದರು. ಆಗಿನಿಂದಲೂ ಬಿಜೆಪಿಯ ಭದ್ರಕೋಟೆಯಾಗಿದ್ದು, 2014 ಹಾಗೂ 2019ರ ಚುನಾವಣೆಗಳಲ್ಲಿ ಉದಾಸಿಯವರೇ ಗೆಲುವು ಕಂಡಿದ್ದರು. ಈ ಬಾರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆದ್ದು ಮೊದಲ ಬಾರಿಗೆ ಸಂಸತ್​ಗೆ ಪ್ರವೇಶಿಸುತ್ತಿದ್ದಾರೆ.


ಬೊಮ್ಮಾಯಿ ರಾಜೀನಾಮೆ ಸಲ್ಲಿಕೆ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ. ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮುಳೆ ಹಾಗೂ ಭೋಜೇಗೌಡ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ