LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಭೇಟಿ

ಸಂಕೇಶ್ವರ : ನಿರಂತರ ಸುರಿಯುತ್ತಿರುವ ಮಳೆಯಿಂದ ಹಿರಣ್ಯಕೇಶಿ ನದಿ ಪ್ರವಾಹಕ್ಕೆ ಒಳಗಾದ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು.


ಪಟ್ಟಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಾದ ನದಿ ಗಲ್ಲಿ, ಮಠ ಗಲ್ಲಿ, ವಿಕ್ಷಿಸಿದ ನಂತರ ಶಂಕರಲಿಂಗ ಕಾರ್ಯಲಯ, ಉರ್ದು ಶಾಲೆಯಲ್ಲಿ ಪ್ರಾರಂಭಿಸಿದ ಕಾಳಜಿ ಕೇಂದ್ರಕ್ಕೆ ಬೇಟಿ ಸಂತ್ರಸ್ತರಿಗೆ ಹೊದಿಕೆ ನೀಡಿದರು.


ನಂತರ ಮಾತನಾಡಿದ ಅವರು,ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನತೆ ಯಾರು ಕೂಡ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ, ತಹಶೀಲ್ದಾರ , ಸ್ಥಳೀಯ ಮಟ್ಟದ ಅಧಿಕಾರಿಗಳು ಸೇರಿದಂತೆ ನಾವು ಕೂಡ ನಿರಂತರವಾಗಿ ನಿಮ್ಮ ಜೊತೆ ಇದ್ದೇವೆ ಎಂದರು.


ಜಿಲ್ಲಾಡಳಿತ, ಸ್ಥಳೀಯ ಮಟ್ಟದ ಅಧಿಕಾರಿಗಳು ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರ ಆರಂಭಿಸಿದ್ದು, ಗುಣಮಟ್ಟದ ಆಹಾರವನ್ನು ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿದೆ ಎಂದರು. ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿದ್ದು, ಸಂತ್ರಸ್ತರು ಹಲವು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು.


ಇದೇ ವೇಳೆ ಅಧಿಕಾರಿಗಳಿಂದ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ತಹಶೀಲ್ದಾರ ಮಂಜುಳಾ ನಾಯಿಕ, ತಾಲೂಕಾ ವೈದ್ಯಾಧಿಕಾರಿ ಉದಯ ಕುಡಚಿ, ಉಪ ತಹಶೀಲ್ದಾರ ಸಿ.ಎ.ಪಾಟೀಲ, ಕಂದಾಯ ನಿರೀಕ್ಷಕ ಎ.ಎಮ್. ಕಮತನೂರ, ಪುರಸಭೆಯ ಮುಖ್ಯಾಧಿಕಾರಿ ಪ್ರಕಾಶ ಮಠದ, ಸಿಪಿಐ ಶಿವಶರಣ ಅವಜಿ, ಅಭಿಯಂತರ ರವೀಂದ್ರ ಗಡಾದ,ಗ್ರಾಮ ಲೆಕ್ಕಾಧಿಕಾರಿಗಳಾದ ಎನ್.ಆರ್ ಪಾಟೀಲ,  ಸೇರಿದಂತೆ ಮುಖಂಡರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್