LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಿಲ್ಲೆಗೆ ಅನ್ಯಾಯವಾಗುವುದನ್ನು ತಡೆಯುವ ಸಾಮರ್ಥ್ಯ ಮೃಣಾಲ್ ಗೆ ಇದೆ - ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮೃಣಾಲ ಹೆಬ್ಬಾಳಕರ್ ಅತ್ಯಂತ ಕ್ರಿಯಾಶೀಲ ಯುವಕನಾಗಿದ್ದು, ಲೋಕಸಭೆಗೆ ಹೋದಲ್ಲಿ ಜಿಲ್ಲೆಗೆ ಅನ್ಯಾಯವಾಗುವುದನ್ನು ತಡೆಯುವ ಸಾಮರ್ಥ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.




ಬೆಳಗಾವಿಯ ಅನಗೊಳದಲ್ಲಿ ಲೋಕಸಭೆ ಚುನಾವಣೆಯ ಪ್ರಚಾತ ಕೈಗೊಂಡು ಮಾತನಾಡಿದ ಅವರು, ವಿದ್ಯಾವಂತ, ಎಲ್ಲ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ, ನಮ್ಮನ್ನು ಪ್ರತಿನಿದಿಸುವ ಸಮರ್ಥ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್. ಅವರನ್ನು ಆಯ್ಕೆ ಮಾಡಿದರೆ ಕೇವಲ ಒಂದೇ ವರ್ಷದಲ್ಲಿ ನಮ್ಮ ಮತ ಸಾರ್ಥಕವಾಯಿತು ಎನ್ನುವ ಭಾವನೆ ಬರುವಂತೆ ಕೆಲಸ ಮಾಡುತ್ತಾನೆ ಎಂದು ಅವರು ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನ ಸಭಾ ಕ್ಷೇತ್ರಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅತ್ಯಧಿಕ ಮುನ್ನಡೆ ಸಾಧಿಸಲಿದೆ. ಬಿಜೆಪಿ ಅಭ್ಯರ್ಥಿ ಕುರಿತು ಅವರ ಪಕ್ಷದಲ್ಲೇ ದೊಡ್ಡ ಮಟ್ಟದ ಅಸಮಾಧಾನವಿದೆ. ಕೆಲವು ಮುಖಂಡರು ಕಾಟಾಚಾರಕ್ಕೆನ್ನುವಂತೆ ಪ್ರಚಾರಕ್ಕೆ ಹೋಗುತ್ತಿದ್ದಾರೆ. ಜಗದೀಶ್ ಶೆಟ್ಟರ್ ಗೆ ಮತ ಹಾಕಲು ಜಿಲ್ಲೆಯ ಸ್ವಾಭಿಮಾನಿ ಜನರ ಮನಸ್ಸು ಒಪ್ಪುವುದಿಲ್ಲ. ಅವರು ಜಿಲ್ಲೆಗೆ ಮಾಡಿರುವ ಅನ್ಯಾಯವನ್ನು ನೋಡಿಯೂ ಮತ ಹಾಕಿದರೆ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಚನ್ನರಾಜ ಎಚ್ಚರಿಸಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್