LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಲತವಾಡ ಆಸ್ಪತ್ರೆ ಪ್ರಕರಣ: ನನ್ನ ವಿರುದ್ಧ ಷಡ್ಯಂತ್ರ ಎಂದು ಆರೋಪಿಸಿ ವೀರೇಶ ಆಲಕೊಪ್ಪರ ಮಾತ್ರೆ ಸೇವನೆ

ನಾಲತವಾಡ: ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಕುಸುಮಾ ಹುಡೇದ ಅವರು ಮಾತ್ರೆ ಸೇವಿಸಿದ ಘಟನೆಗೆ ತಮ್ಮನ್ನು ಹೊಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಯುವಕ ವೀರೇಶ ಆಲಕೊಪ್ಪರ ಬುಧವಾರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕಳೆದ ಕೆಲವು ದಿನಗಳಿಂದ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ವಿಚಾರವಾಗಿ ನಡೆಯುತ್ತಿದ್ದ ಆರೋಪ-ಪ್ರತ್ಯಾರೋಪಗಳ ನಡುವೆಯೇ ಈ ಘಟನೆ ನಡೆದಿದೆ. ಈ ವೇಳೆ ವೀರೇಶ ಆಲಕೊಪ್ಪರ ಮಾತನಾಡಿ, ಕುಸುಮಾ ಹುಡೇದ ಅವರು ಮಾತ್ರೆ ಸೇವಿಸಿದ ಘಟನೆಗೆ ನನ್ನನ್ನು ಕಾರಣವೆಂದು ಬಿಂಬಿಸಲಾಗುತ್ತಿದೆ. ಆದರೆ ಈ ಘಟನೆಗೆ ನನ್ನ ಯಾವುದೇ ಪಾತ್ರವಿಲ್ಲ. ನನ್ನ ಹೋರಾಟವನ್ನು ಹತ್ತಿಕ್ಕಲು ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆರೋಪಿಸಿದರು.

news_1782919833_0_847.webp

ನಾನು ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಕಾನೂನುಬದ್ಧವಾಗಿ ಹೋರಾಟ ನಡೆಸುತ್ತಿದ್ದೇನೆ. ನನ್ನ ಹೋರಾಟದ ಹಿಂದೆ ಯಾವುದೇ ದುರುದ್ದೇಶವಿಲ್ಲ. ಆದರೆ ಹೋರಾಟವನ್ನು ನಿಲ್ಲಿಸಲು ನನ್ನ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ. ನನ್ನ ಸಾವಿಗೆ 61 ಜನರು ಕಾರಣರಾಗುತ್ತಾರೆ. ನನ್ನ ಜೀವಕ್ಕೆ ಬೆದರಿಕೆ ಇದೆ ಎಂದು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿದ್ದೇನೆ ಎಂದು ಹೇಳಿದರು.

  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಹೆಸರನ್ನು ನಾನು ಎಲ್ಲಿಯೂ ದುರ್ಬಳಕೆ ಮಾಡಿಕೊಂಡಿಲ್ಲ. ಅವರ ಹೆಸರನ್ನು ಹೇಳಿಕೊಂಡು ಯಾರಿಗೂ ಬೆದರಿಕೆ ಹಾಕಿಲ್ಲ. ನಾನು ಪರಿಶಿಷ್ಟ ಜಾತಿಗೆ ಸೇರಿದ ಯುವಕ ಎಂಬ ಕಾರಣಕ್ಕೆ ನನ್ನ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ನನ್ನ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಅಸ್ವಸ್ಥಗೊಂಡ ವೀರೇಶ ಅವರಿಗೆ ಸ್ಥಳೀಯ ವೈದ್ಯರಾದ ಡಾ. ನಾಯಕ ಅವರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್