LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಕ್ಸಲ್ ತಂಡ ಗುಂಡಿನ ದಾಳಿ ಮಾಡಿದ ಪರಿಣಾಮ ಎನ್​ಕೌಂಟರ್: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕಳೆದ 20 ವರ್ಷಗಳಿಂದ ಪೊಲೀಸರು ಹುಡುಕುತ್ತಿದ್ದ ನಕ್ಸಲ್​ ವಿಕ್ರಂ ಗೌಡನನ್ನ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಎನ್​ಕೌಂಟರ್ ಮಾಡಲಾಗಿದೆ. ನಕ್ಸಲ್ ತಂಡ ಗುಂಡಿನ ದಾಳಿ ಮಾಡಿದ ಪರಿಣಾಮ ಪೊಲೀಸರು ಎನ್​ಕೌಂಟರ್ ಮಾಡಬೇಕಾಯುತ್ತ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.


ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಗಹ ಸಚಿವರು, ಕಳೆದ 20 ವರ್ಷಗಳಿಂದ ಗ್ರೇಡೆಸ್ ನಕ್ಸಲ್ ತಪ್ಪಿಸಿಕೊಂಡು ಓಡಾಡ್ತಿದ್ರು. ಆತನನ್ನು ಸೆರೆಹಿಡಿಯಲು ಮತ್ತು ಎನ್‌ಕೌಂಟರ್ ಮಾಡಲು ಸಾಧ್ಯವಾಗಿರಲಿಲ್ಲ. ಅಂತೆಯೇ ಪೊಲೀಸರು ವಿಕ್ರಂ ಗೌಡ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ನಾವೂ ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅನ್ಕೊಂಡಿದ್ವಿ. ಆದ್ರೆ ಕಳೆದ ವಾರ ರಾಜು ಮತ್ತು ಲತಾ ಎಂಬು ನಕ್ಸಲರು ಪತ್ತೆ ಆದ ಬಳಿಕ ಹೆಬ್ರಿ ಭಾಗದಲ್ಲಿ ಕೂಂಬಿಂಗ್ ಆಪರೇಷನ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡಾಗ ನಕ್ಸಲ್ ತಂಡ ಗುಂಡಿನ ದಾಳಿ ನಡೆಸಿದೆ. ಆಗ ಪೊಲೀಸರು ಅನಿವಾರ್ಯವಾಗಿ ಎನ್​ಕೌಂಟರ್ ಮಾಡಿದ್ದಾರೆ. ಇನ್ನು ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದು, ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಸಚಿವರು ತಿಳಿಸಿದ್ದಾರೆ.


ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗ ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದ್ರೆ ಈ ರೀತಿ ಘಟನೆ ನಡೆಯುವುದು ಸಹಜ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್