LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿಕ್ರಮ್ ಗೌಡ ಎನ್‌ಕೌಂಟರ್ ನ್ಯಾಯಾಂಗ ತನಿಖೆಗೆ ನಕ್ಸಲ್ ಪುನರ್ವಸತಿ ಸಮಿತಿ ಆಗ್ರಹ

ಬೆಂಗಳೂರು: ಪಶ್ಚಿಮ ಘಟ್ಟಗಳ ಕೆಲವು ಭಾಗಗಳಲ್ಲಿ ಸಕ್ರಿಯವಾಗಿರುವ ಸಿಪಿಐ (ಮಾವೋವಾದಿ)ಪಕ್ಷದ ಎಡಪಂಥೀಯ ಉಗ್ರಗಾಮಿಗಳು (ಎಲ್‌ಡಬ್ಲ್ಯೂಇಗಳು) ಶರಣಾಗಲು ಮತ್ತು ಮುಖ್ಯವಾಹಿನಿಗೆ ಸೇರುವಂತೆ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಇತ್ತೀಚೆಗೆ ನಡೆದ ನಕ್ಸಲ್ ನಾಯಕ ವಿಕ್ರಮ್ ಗೌಡನ ಎನ್‌ಕೌಂಟರ್ ಹತ್ಯೆಯ ಬಗ್ಗೆ ಸರ್ಕಾರ ತನಿಖೆ ನಡೆಸುವಂತೆಯೂ ಅವರು ಸಲಹೆ ನೀಡಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯರಾದ ಬಂಜಗೆರೆ ಜಯಪ್ರಕಾಶ್, ಪಾರ್ವತೀಶ ಬಿಳಿದಾಳೆ, ಕೆ.ಪಿ. ಶ್ರೀಪಾಲ್, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ಪರಧಿಯಿಂದಾಚೆ ಪೊಲೀಸ್‌ ಪಡೆಗಳಿಂದ ನಡೆಯುವ ಎನ್‌ಕೌಂಟರ್‌ಗಳ ಕುರಿತು ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಹೊಣೆ.ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರಿಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು.

ಸಮಿತಿಯು ಈಗಾಗಲೇ ವಿಕ್ರಂಗೌಡ ಅವರ ಎನ್‌ಕೌಂಟರ್‌ ನಡೆದ ಸ್ಥಳ ಸೇರಿದಂತೆ ಹೆಬ್ರಿ ತಾಲ್ಲೂಕಿನ ಹಲವು ಸ್ಥಳಗಳಿಗೆ ಭೇಟಿ ನೀಡಿದೆ. ಅಲ್ಲಿರುವ ಆದಿವಾಸಿಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಕೊರತೆಗಳ ಲಾಭ ಪಡೆದು ಕೆಲ ತೀವ್ರಗಾಮಿ ಸಂಘಟನೆಗಳು ಅಲ್ಲಲ್ಲಿ ಸಂಚರಿಸುತ್ತಿರಬಹುದು. ಸರ್ಕಾರ ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಸರ್ಕಾರದ ನಿರ್ಲಕ್ಷ್ಯ ಅಥವಾ ನಿಧಾನಗತಿಯ ಕ್ರಮಗಳು ಬೇರೆ ಸ್ವರೂಪ ಪಡೆದುಕೊಂಡು ಇಂತಹ ಹೋರಾಟಗಾರರಿಗೆ ಜನ್ಮಕೊಡುತ್ತವೆ. ಅರಣ್ಯ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಬಗ್ಗೆ ಆದಿವಾಸಿಗಳು ಆಪಾದಿಸಿದ್ದಾರೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್