Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ; ಅಶೋಕ ಪಟ್ಟಣ

ರಾಮದುರ್ಗ:

ಗ್ರಾಮದ ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ ವಹಿಸಲಾಗುವದು. ಈಗಾಗಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಧ್ಯೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ಬೇಡಿಕೆಗಳನ್ನು ಈಡೆರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ತಾಲೂಕಿನ ಕಟಕೋಳ ಗ್ರಾಮದಲ್ಲಿ ರೂ.೨.೬೦ ಕೋಟಿ ಅನುದಾನದಲ್ಲಿ ಮುನವಳ್ಳಿ-ಕೊಟಮುಗಚಿ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ದಿ ಹಾಗೂ ತೋರಣಗಟ್ಟಿ ಗ್ರಾಮದಲ್ಲಿ ರೂ. ೩೦ ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಸೇರಿದಂತೆ ೨.೯೦ ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಮುಖ್ಯ ರಸ್ತೆ ಸೇರಿದಂತೆ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

Advertisement

ಈ ಸಂದರ್ಭದಲ್ಲಿ ತೋರಣಗಟ್ಟಿ ಗ್ರಾಮದ ಅಜ್ಜಯ್ಯಸ್ವಾಮಿ, ಮಹಾಂತಯ್ಯ ಬೇವಿನಮಠ, ಶಿದ್ಲಿಂಗಪ್ಪ ಶಿಂಗಾರಗೊಪ್ಪ, ಶಿವಪ್ಪ ಮುನವಳ್ಳಿ, ಮಹಾದೇವ ಚಿನ್ನಾಕಟ್ಟಿ, ಗ್ರಾ.ಪಂ. ಆಡಳಿತಾಧಿಕಾರಿ ಪ್ರಕಾಶ ಮುಗಳಖೋಡ, ಬಾಳಪ್ಪ ತೊಂಡಿಕಟ್ಟಿ, ಪಿಕೆಪಿಎಸ್ ಅಧ್ಯಕ್ಷ   ಪರಮೇಶ ಐನಾಪೂರ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ ತಿಪ್ಪನ್ನವರ, ಗ್ರಾ.ಪಂ ಮಾಜಿ ಅಧ್ಯಕ್ಷೆಯರಾದ ಲಕ್ಷ್ಮೀ ಮುದಗೋಡ, ಅನಸವ್ವ ಬಡಕಲೂರ, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಉಪಸ್ಥಿತರಿದ್ದರು. ರುದ್ರಪ್ಪ ಶಿಂಗಾರಗೊಪ್ಪ ಸ್ವಾಗತಿಸಿ, ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*