Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ

ಮುಂದಿನ ವರ್ಷದಿಂದ ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ಮಾದರಿಯಲ್ಲಿ ನೀಟ್ ಪರೀಕ್ಷೆ

ದೆಹಲಿ, ಮೇ.15: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಈಗ ಅದರ ಮರು ಪರೀಕ್ಷೆಯನು ದಿ. ೨೧-೦೬-೨೦೨೬ ಗೆ ನಿಗದಿ ಪಡಿಸಿ ಘೋಷಿಸಲಾಗಿದೆ.  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೆ ಎಚ್ಚೇತ್ತಿರುವ ಕೇಂದ್ರ ಸರಕಾರ ಮುಂದಿನ ವರ್ಷದಿಂದ ನೀಟ್‌ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ಮಾದರಿಯಲ್ಲಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

news_1778828733_0_225.webp

 

Advertisement

ನೀಟ್‌ ಮರು ಪರೀಕ್ಷೆಯ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಜೂನ್ 14 ರೊಳಗೆ ವಿತರಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಒಂದು ವಾರ ಮುಂಚಿತವಾಗಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಮರು ಪರೀಕ್ಷೆಗೆ ಯಾವುದೇ ಶುಲ್ಕವಿರುವುದಿಲ್ಲ ಮತ್ತು ಈ ಹಿಂದೆ ಪಾವತಿಸಿದ್ದ ಪರೀಕ್ಷಾ ಶುಲ್ಕವನ್ನು ಅಭ್ಯರ್ಥಿಗಳಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ‘ಶೂನ್ಯ ಸಹನೆ’ ನೀತಿಯನ್ನು ಸರಕಾರ ಹೊಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಫಿಯಾಗಳು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಸೀಟುಗಳನ್ನು ಕಸಿಯಲು ಬಿಡುವುದಿಲ್ಲ, ಹಗರಣದ ಮೂಲ ಪತ್ತೆಹಚ್ಚಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು. ವಿಚಾರಣೆಯು ತೀವ್ರಗೊಳಿಸಲಾಗಿದೆ.

ಎನ್‌ಟಿಎ ವ್ಯವಸ್ಥೆಯನ್ನು ಇನ್ನೂ ಹೆಚ್ಚು ಬಲಪಡಿಸಲು ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಾಗುವುದು. ಅದಕ್ಕಾಗಿ ಈಗ  ಐಐಟಿ-ಜೆಇಇ ಮಾದರಿಯಲ್ಲಿಯೇ ನೀಟ್ ಪರೀಕ್ಷೆಯನ್ನೂ ಡಿಜಿಟಲ್ ರೂಪಕ್ಕೆ ತರಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*